ಪೋನ್ ಕದ್ದಾಲಿಕೆ ಪ್ರಕರಣ ಠುಸ್ ಪಟಾಕಿ ಸಾಧ್ಯತೆ……!
ಬೆಂಗಳೂರು prajakiran.com : ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿದ್ದ ಧಾರವಾಡ ಬಿಜೆಪಿ ಶಾಸಕ ಅರವಿಂದ ಬೆಲ್ಲದ ಪೋನ್ ಕದ್ದಾಲಿಕೆ ಪ್ರಕರಣ ರೋಚಕ ತಿರುವು ಪಡೆದಿದೆ.
ಕೊನೆಗೂ ಎಲ್ಲರ ನಿರೀಕ್ಷೆಯಂತೆ ಅದು ಠುಸ್ ಪಟಾಕಿ ಆಗುವ ಸಾಧ್ಯತೆ ಹೆಚ್ಚು ಎಂದು ಹೇಳಲಾಗುತ್ತದೆ.
ಅವರು ಈ ಕುರಿತು ತನಿಖೆ ನಡೆಸಿ, ತಮಗೆ ಸೂಕ್ತ ರಕ್ಷಣೆ ನೀಡುವಂತೆ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಅವರಿಗೆ ಪತ್ರ ಬರೆದಿದ್ದರು.
ಅದರಂತೆ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂಥ ಅವರು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ಎಸಿಪಿಗೆ ಈ ಕುರಿತು ತನಿಖೆ ನಡೆಸಲು ಸೂಚಿಸಿದ್ದರು.
ಅದರಂತೆ ತನಿಖೆ ಕೈಗೊಂಡ ಪೊಲೀಸರು ಶಾಸಕ ಅರವಿಂದ ಬೆಲ್ಲದ ಹೇಳಿಕೆ ಪಡೆದಿದ್ದರು.
ಜೊತೆಗೆ ಬೆಂಗಳೂರಿನ ಪರಪ್ಪ ಅಗ್ರಹಾರ ಜೈಲಿನಲ್ಲಿ ಇರುವ ಯುವರಾಜ್ ಸ್ವಾಮಿ ವಿಚಾರಣೆ ನಡೆಸಿ ಮಹತ್ವದ ಮಾಹಿತಿಯನ್ನು ಕಲೆ ಹಾಕಿದ್ದರು.
ಈ ವೇಳೆ ಶಾಸಕ ಅರವಿಂದ ಬೆಲ್ಲದ ನೀಡಿದ ಅಪರಿಚಿತ ಕರೆಗೆ ಗಂಟೆಯವರೆಗೆ ಮಾತನಾಡಿದ್ದು ಬೆಳಕಿಗೆ ಬಂದಿದ್ದು, ಇದು ಹೇಗೆ ಸಾಧ್ಯ ಎಂದು ಪೊಲೀಸರು ಪ್ರಶ್ನಿಸಿದರು.
ಇದಕ್ಕೆ ಪ್ರತಿಯಾಗಿ ಶಾಸಕ ಅರವಿಂದ ಬೆಲ್ಲದ ಇದು ತಮ್ಮ ಆಪ್ತನ ಕರೆ ಎಂದು ಹೇಳಿ ಯೂ ಟರ್ನ್ ಹೊಡೆದಿದ್ದಾರೆ ಎಂದು ಹೇಳಲಾಗುತ್ತಿದೆ.
ಅಲ್ಲದೆ ಪ್ರಕರಣ ಮುಂದುವರೆಸಿದ್ದಲ್ಲಿ ತಮಗೆ ತಿರುಗುಬಾಣವಾಗುವ ಸಾಧ್ಯತೆ ಅರಿತುಕೊಂಡು ನೀಡಿದ ದೂರಿನ ಅರ್ಜಿಯನ್ನು
ವಾಪಾಸ್ ಪಡೆಯಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.
ಆದರೆ, ಧಾರವಾಡ ಬಿಜೆಪಿ ಶಾಸಕ ಅರವಿಂದ ಬೆಲ್ಲದ ಪೋನ್ ಕದ್ದಾಲಿಕೆ ಪ್ರಕರಣ ಮುಂದಿನ ನಡೆ ಏನು, ಅವರು ನಡುವೆ ನಿಜವಾಗಿಯೂ ದೂರನ್ನು ಹಿಂದಕ್ಕೆ ಪಡೆಯುತ್ತಾರೆಯೇ ಇಲ್ಲವೇ ಎಂಬುದನ್ನು ಕಾದು ನೋಡಬೇಕು.
ಜೊತೆಗೆ ಈ ಬಗ್ಗೆ ಬೆಲ್ಲದ ಅವರ ನಿಲುವು ಎನಾಗಲಿದೆ ಎಂಬುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.