ರಾಜ್ಯ

ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಎದುರು ಸಾವರ್ಕರ್ ಫೋಟೋ ಸುಟ್ಟ ಕಾಂಗ್ರೆಸ್ ಕಾರ್ಯಕರ್ತರು…..!?

ಧಾರವಾಡ prajakiran. com : ಮಡಿಕೇರಿ ಪ್ರವಾಸದ ವೇಳೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆದ ಪ್ರಕರಣ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ಸಂದರ್ಭದಲ್ಲಿ ವಿನಾಯಕ ದಾಮೋದರ ಸಾವರ್ಕರ್ ಅವರ ಭಾವಚಿತ್ರಕ್ಕೆ ಬೆಂಕಿ ಹಚ್ಚಿರುವ ಘಟನೆ ಶುಕ್ರವಾರ ನಡೆದಿದೆ.

ಈ ಸಂದರ್ಭದಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ಪ್ರತಿಕೃತಿ ದಹಿಸುವುದರ ಜೊತೆಗೆ ಮೊಟ್ಟೆ ಎಸೆದ ಕಾರ್ಯಕರ್ತರು ಸಾವರ್ಕರ್ ಅವರ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಆದರೆ ಈ ಕುರಿತು ಎಐಸಿಸಿ ಸದಸ್ಯರು ಆಗಿರುವ ಧಾರವಾಡದ ಕಾಂಗ್ರೆಸ್ ಪಕ್ಷದ ‌ನಾಯಕ ದೀಪಕ ಚಿಂಚೋರೆ ಸ್ಪಷ್ಡನೆ ನೀಡಿದ್ದು, ಕಾಂಗ್ರೆಸ್ ಪಕ್ಷದ ಸದಸ್ಯರು ಭಾವಚಿತ್ರವನ್ನು ಸುಟ್ಟಿಲ್ಲ ಎಂದು ತಿಳಿಸಿದ್ದಾರೆ.

ಅದರ ಸಾರಾಂಶ ಹೀಗಿದೆ ನೋಡಿ : 

ಕಾಂಗ್ರೆಸ್ ಪಕ್ಷದ ವತಿಯಿಂದ
ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಹಮ್ಮಿಕೊಂಡಿದ್ದ ಪ್ರತಿಭಟನೆ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು
ವೀರ ಸಾವರ್ಕರ್ ಭಾವಚಿತ್ರ ದಹಿಸಿಲ್ಲ.

ಕೊಡಗು ಜಿಲ್ಲೆಯ ‌ಪ್ರವಾಸದಲ್ಲಿದ್ದ ವಿಧಾನಸಭೆಯ ಪ್ರತಿಪಕ್ಷ‌ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಕೃತ್ಯವನ್ನು ಖಂಡಿಸಿ ನಗರದ ಕಲಾಭವನದಿಂದ ಜಿಲ್ಲಾಧಿಕಾರಿ ಕಚೇರಿತನಕ
ಪಾದಯಾತ್ರೆ ನಡೆಸಿ, ನಂತರ ಅಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿತ್ತು.

ಈ ಸಂದರ್ಭದಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ಪ್ರತಿಕ್ರತಿ ದಹಿಸಿ, ಬಳಿಕ ಜಿಲ್ಲಾಧಿಕಾರಿಗಳಿಗೆ ಮನವಿ ಕೂಡ ಸಲ್ಲಿಸಲಾಯಿತು.

ಆದರೆ, ಪ್ರತಿಭಟನೆ ಸಮಯದಲ್ಲಿ ಯಾವುದೇ ಕಾಂಗ್ರೆಸ್ ಮುಖಂಡರಾಗಲಿ ಅಥವಾ ಕಾರ್ಯಕರ್ತರು ವೀರ ಸಾವರ್ಕರ್ ಅವರ ಭಾವಚಿತ್ರ ಅಥವಾ ಪ್ರತಿಕೃತಿ ದಹಿಸಿಲ್ಲ. ಈ ವಿಷಯ ನಮ್ಮ ಗಮನಕ್ಕೂ ಬಂದಿಲ್ಲ.

ಆದ್ದರಿಂದ ವೀರ ಸಾವರ್ಕರ್ ಭಾವಚಿತ್ರ ಅಥವಾ ಪ್ರತಿಕೃತಿ ದಹನದ ಪ್ರಕರಣಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ.

ಒಂದು ವೇಳೆ ಇಂತಹ ಘಟನೆ ನಡೆದಿದ್ದರೆ ಅದು ಕಾಂಗ್ರೆಸ್ಸಿಗರ ಮೇಲೆ ಗೂಬೆ ಕೂಡಿಸುವ ಷಡ್ಯಂತ್ರದ ಭಾಗವಾಗಿರಬಹುದು.

ಇಂದ
ದೀಪಕ ಚಿಂಚೋರೆ
ಎಐಸಿಸಿ ಸದಸ್ಯರು.

 

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *