ಧಾರವಾಡ prajakiran. com : ಮಹಿಳೆಯೊಬ್ಬಳ ಮೇಲೆ ಹಂದಿ ದಾಳಿ ಮಾಡಿದ ಘಟನೆ ಧಾರವಾಡ ಗೌಳಿ ಗಲ್ಲಿಯಲ್ಲಿ ನಡೆದಿದೆ.
ಇದರಿಂದಾಗಿ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಹಂದಿ ಏಕಾಏಕಿ ದಾಳಿ ಮಾಡಿದ್ದರಿಂದ ಕಾಲು, ಕೈ ಸೇರಿದಂತೆ ದೇಹದ ತುಂಬಾ ಹಂದಿ ಪರಚಿದೆ.
ಈ ಗಾಯಗೊಂಡ ಮಹಿಳೆಯನ್ನು ಧಾರವಾಡ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
ಧಾರವಾಡ ನಗರದ ಗೌಳಿ ಗಲ್ಲಿಯಲ್ಲಿ ಹಂದಿಗಳ ಕಾಟ ಹೆಚ್ಚಾಗಿದ್ದರಿಂದ ಜನರಲ್ಲಿ ಆತಂಕ ಸೃಷ್ಟಿಸಿದೆ.
ಇನ್ನೂ ಚಿಕ್ಕ ವಯಸ್ಸಿನ ಮಕ್ಕಳು ಹಾಗೂ ವೃದ್ಧರು ಭಯದಿಂದ ಓಡಾಡುವ ಸ್ಥಿತಿ ನಿರ್ಮಾಣವಾಗಿದೆ.
ಈಗಲಾದರೂ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಗಳು ಹಂದಿಗಳ ಕಾಟ ದೂರ ಮಾಡಬೇಕು ಎಂದು ಜನರು ಆಗ್ರಹಿಸಿದ್ದಾರೆ.