ಬೀದರ prajakiran.com : ದೇವಸ್ಥಾನದಲ್ಲಿನ ಘಂಟೆಗೆ ಪೂಜಾರಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೀದರ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಬಸವ ಕಲ್ಯಾಣದ ತಾಲೂಕಿನ ಮೋರಖಂಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ನಾಗರಾಜ ಸ್ವಾಮಿ (38) ಎಂಬಾತನೇ ಆತ್ಮಹತ್ಯೆ ಮಾಡಿಕೊಂಡವನಾಗಿದ್ದಾನೆ
ಬೆಳಗ್ಗೆ ಮಂದಿರಕ್ಕೆ ಆಗಮಿಸಿದ ಈತ ದೇವಸ್ಥಾನದ ಘಂಟೆಗೆ ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.
ಗ್ರಾಮದ ಸಿದ್ಧೇಶ್ವರ ದೇವಸ್ಥಾನದ ಪೂಜಾರಿಯಾಗಿದ್ದ ಈತನಿಗೆ, 7 ಎಕರೆ ಜಮೀನಿದ್ದು, ಪಿಕೆಪಿಎಸ್ ಹಾಗೂ ಕೃಷ್ಣಾ ಗ್ರಾಮೀಣ ಬ್ಯಾಂಕ್ಗಳಲ್ಲಿ ಸುಮಾರು 3.50 ಲಕ್ಷ ರೂ.ಗೂ ಅಧಿಕ ಕೃಷಿ ಸಾಲವಿತ್ತು ಎಂದು ಗೊತ್ತಾಗಿದೆ.
ಸಾಲ ತೀರಿಸಲಾಗದೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೃತನ ಪತ್ನಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಪಿಐ ಮಹೇಶಗೌಡ ಪಾಟೀಲ, ಪಿಎಸ್ಐ ವಸಿಮ್ ಪಟೇಲ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ತನಿಖೆ ಮುಂದುವರೆದಿದೆ.