ಹುಬ್ಬಳ್ಳಿ Prajakiran.com : ಹುಬ್ಬಳ್ಳಿ-ಧಾರವಾಡ ಅವಳಿ ನಗರದ ಪೊಲೀಸ್ ಆಯುಕ್ತರಾದ ಲಾಬುರಾಮ್ ಅವರು ನಗರದ ವಿವಿಧ ಇಕ್ಕಟ್ಟಾದ ಸರ್ಕಲ್ಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದರು.
ನಗರದ ದೇಶಪಾಂಡೆ ನಗರದಲ್ಲಿನ ಸರ್ಕಲ್ ಪರಿಶೀಲನೆ ನಡೆಸಿದ ಪೊಲೀಸ್ ಕಮಿಷನರ್
ಲಾಬುರಾಮ್ ಅವರಿಗೆ ಮಹಾನಗರ ಪಾಲಿಕೆ ಅಧಿಕಾರಿಗಳು ಸಾಥ್ ನೀಡಿದರು.
ಅಲ್ಲದೆ, ಹುಬ್ಬಳ್ಳಿ ಧಾರವಾಡ ಟ್ರಾಫಿಕ್ ನಿಯಂತ್ರಣಕ್ಕಾಗಿ ರಸ್ತೆಗಳ ಅಗಲೀಕರಣದ ಚಿಂತನೆಯನ್ನು, ಮಹಾನಗರ ಪಾಲಿಕೆ ಆಯುಕ್ತ ಸುರೇಶ್ ಇಟ್ನಾಳ ಹಾಗೂ ಇತರೆ ಅಧಿಕಾರಿಗಳೊಂದಿಗೆ ಸಮಾಲೋಚನೆ ಮಾಡಿದರು.