ಧಾರವಾಡ ಪ್ರಜಾಕಿರಣ.ಕಾಮ್ : ಜಿಲ್ಲೆಯ ಹೆಬ್ಬಳ್ಳಿ ಜಿಪಂ ಬಿಜೆಪಿ ಸದಸ್ಯ ಯೋಗೀಶಗೌಡರ ಕೊಲೆ ಪ್ರಕರಣದ ಸಿಬಿಐ ತನಿಖೆಯಲ್ಲಿ ಆರೋಪಿಯಾಗಿರುವ ಪೊಲೀಸ್ ಇನ್ಸಪೆಕ್ಟರ್ ಚೆನ್ನಕೇಶವ ಟಿಂಗಿರಿಕರ್
ಸಿಬಿಐ ಅವರ ಕಣ್ಣು ತಪ್ಪಿಸಿ ಪರಾರಿಯಾಗಿದ್ದಾರೆ.
ಧಾರವಾಡದ ಮಲಪ್ರಭಾ ನಗರದಲ್ಲಿರುವ ಅವರ ಮನೆಗೆ ಬೆಳ್ಳ್ಂಬೆಳಗ್ಗೆ ರಾಕೇಶ್ ರಂಜನ್ ನೇತೃತ್ವದ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ ಬಂಧಿಸಲು ಮುಂದಾಗಿದ್ದರು.
ಈ ವೇಳೆ ಬಾಗಿಲು ತೆರೆದ ಪೊಲೀಸ್ ಇನ್ಸಪೆಕ್ಟರ್ ಚೆನ್ನಕೇಶವ ಟಿಂಗರಿಕರ್ ಅವರ ಪತ್ನಿ ಸಿಬಿಐ ಎಂದ ತಕ್ಷಣ ಬಾಗಿಲು ಮುಚ್ಚಿದ್ದಾರೆ. ತಕ್ಷಣ ಟಿಂಗರಿಕರ್ ಹಿಂದಿನ ಬಾಗಿಲಿನಿಂದ ಪರಾರಿಯಾಗಿದ್ದಾರೆ.
ಚೆನ್ನಕೇಶವ ಟಿಂಗರಿಕರ್ ಸದ್ಯ ಜಾಮೀನಿನ ಮೇಲೆ ಹೊರಗಡೆಯಿದ್ದರು.
ಅವರು ಸತತವಾಗಿ ನ್ಯಾಯಾಲಯದ ಮುಂದೆ ಹಾಜರಾಗದ
ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು
ಎನ್ ಬಿ ಡಬ್ಯೂ ಆಗಿತ್ತು.
ಈ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳ ತಂಡ ಅವರ ಮನೆ ಮೇಲೆ ದಾಳಿ ನಡೆಸಿ ಬಂಧಿಸಿ ಅ. 10 ರಂದು ನ್ಯಾಯಾಲಯದ ಮುಂದೆ ಹಾಜರು ಪಡಿಸಲು ಮುಂದಾಗಿತ್ತು.
ಆದರೆ ಚೆನ್ನಕೇಶವ ಟಿಂಗರಿಕರ್ ಸಿಬಿಐಗೆ ಚಳ್ಳೆ ಹಣ್ಣು ತಿನ್ನಿಸಿದ್ದರಿಂದ ಪ್ರಕರಣ ಮತ್ತೊಂದು ಹೊಸ ತಿರುವು ಪಡೆದಿದೆ.
ಈ ಹಿಂದೆ ಇದೇ ಪೊಲೀಸ್ ಇನ್ಸಪೆಕ್ಟರ್ ಚೆನ್ನಕೇಶವ ಟಿಂಗರಿಕರ್ ಯೋಗೀಶಗೌಡ ಗೌಡರ 2016 ಜೂನ್ 15ರಂದು ಸಪ್ತಾಪುರದ ಉದಯ ಜಿಮ್ ನಲ್ಲಿ ಬೆಳ್ಳಂ ಬೆಳಗ್ಗೆ ಕೊಲೆಯಾದಾಗ ಧಾರವಾಡ ಉಪನಗರ ಪೊಲೀಸ್ ಠಾಣೆ ಇನ್ಸ ಪೆಕ್ಟರ್ ಅಂದರೆ ತನಿಖಾಧಿಕಾರಿಯಾಗಿ ಇಡೀ ಪ್ರಕರಣವನ್ನು ಮೇಲಾಧಿಕಾರಿಗಳ ಅಣತಿಯಂತೆ ಹಳ್ಳಹಿಡಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಆರೋಪದ ಮೇಲೆ ಸಿಬಿಐ ಇವರನ್ನು ಕೂಡ ಆರೋಪಿಯನ್ನಾಗಿಸಿರುವುದು ಇಲ್ಲಿ ಸ್ಮರಿಸಬಹುದು