ವಿಜಯಪುರ prajakiran.com : ಬಹು ಚರ್ಚಿತವಾಗಿರುವ ವಿಜಯಪುರ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆ ವೇಳೆ ಕಾಂಗ್ರೆಸ್ ಮುಖಂಡರು ಬಿಜೆಪಿಯ ಸದಸ್ಯರನ್ನು ಸೆಳೆದಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಾರ್ಯ ಕರ್ತರು ಜಿಪಂ ಮುಖ್ಯದ್ವಾರ ಬಳಿ ನಡೆಸಿದ ಪ್ರತಿಭಟನೆ ವೇಳೆ ಜನ ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದರು.
ಜಿ.ಪಂ 42 ಸದಸ್ಯರಲ್ಲಿ ಅಧ್ಯಕ್ಷ ಸ್ಥಾನ ಪಡೆಯಲು 22ಸ್ಥಾನದ ಅವಶ್ಯಕಕತೆ ಇದೆ. ಬಿಜೆಪಿ-20 ಕಾಂಗ್ರೆಸ್-18, ಜೆಡಿಎಸ್ 3 ಹಾಗೂ ಪಕ್ಷೇತರ ಒಬ್ಬ ಸದಸ್ಯನಿದ್ದಾನೆ.
ಮಂಗಳವಾರ ಅಧ್ಯಕ್ಷ ಸ್ಥಾನದ ಚುನಾವಣೆ ವೇಳೆ ಕಾಂಗ್ರೆಸ್ ಮುಖಂಡರು ಬಿಜೆಪಿಯ ನಾಲ್ವರು ಸದಸ್ಯರನ್ನು ಕಾಂಗ್ರೆಸ್ ನವರು ಹೈಜಾಕ್ ಮಾಡಿದ್ದಾರೆ ಎಂದು ಆರೋಪಿಸಿ, ಕಾಂಗ್ರೇಸ್ ಸದಸ್ಯರ ಬಸ್ ಬಂದ ಕೂಡಲೇ ಅದನ್ನು ತಡೆದು ಪ್ರತಿಭಟನೆ ನಡೆಸಿದರು.
ಇದೇ ವೇಳೆ ಬಸ್ ಮೇಲೆ ಪ್ರತಿಭಟನಾ ನಿರತರು ಕಲ್ಲು ತೂರಾಟ ಮಾಡಿದ ಪರಿಣಾಮ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಲು ಲಾಠಿ ಬೀಸಿದರು.
ಈ ವೇಳೆ ಒಬ್ಬ ಪೊಲೀಸ್ ಗೂ ಗಾಯವಾಗಿದೆ. ಇನ್ನು ಸ್ಥಳಕ್ಕೆ ಮಾಜಿ ಸಚಿವ ಎಮ್.ಬಿ.ಪಾಟೀಲ್ ಬರುತ್ತಲೇ ಪ್ರಧಾನಿ ಮೋದಿ ಪರ ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಿದರು.
ಇನ್ನೂ ಕಾಂಗ್ರೆಸ್ ಕಾರ್ಯಕರ್ತರು ಎಮ್.ಬಿ.ಪಾಟೀಲ್ ಪರ ಘೋಷಣೆ ಕೂಗಿದರು. ಜಿ.ಪಂ.ಆವರಣದಲ್ಲಿ ಸೆಕ್ಷನ್ 144 ಕಲಂ ಜಾರಿ ಇದ್ದರೂ ಸಹ ಗೊಂದಲಕ್ಕೆ ಕಾರಣವಾಯಿತು.