ಬೆಂಗಳೂರು Prajakiran.com : ಕನ್ನಡ ಸರಿಗಮಪ ಖ್ಯಾತಿಯ ಹೆಡ್ ಕಾನ್ ಸ್ಟೇಬಲ್ ಸುಬ್ರಹ್ಮಣ್ಯ ಅವರ ಪತ್ನಿ ಕೋವಿಡ್ ಮಹಾಮಾರಿಗೆ ಬಲಿಯಾಗಿದ್ದಾರೆ.
ಸುಬ್ರಹ್ಮಣ್ಯ ಪತ್ನಿ ಜ್ಯೋತಿ ಅವರಿಗೆ ಕಳೆದ ಒಂದು ವಾರದ ಹಿಂದೆ ಕೊರೋನಾ ಸೋಂಕು ದೃಢಪಟ್ಟಿತ್ತು.
ಎರಡು ದಿನಗಳ ಹಿಂದೆ ಜ್ಯೋತಿ ಅವರಿಗೆ ಉಸಿರಾಟ ತೊಂದರೆ ಕಾಣಿಸಿಕೊಂಡಿದ್ದು, ಚಿಕಿತ್ಸೆಗಾಗಿ ಬೆಂಗಳೂರಿನ ಹಲವು ಆಸ್ಪತ್ರೆಗಳಲ್ಲಿ ಓಡಾಡಿದರೂ ಕೂಡ ವೆಂಟಿಲೇಟರ್ ಬೆಡ್ ಸಿಗದೆ ಪರದಾಡಿದ್ದಾರೆ.
ನಂತರ ಹೊಸಕೋಟೆಯ ಸಿಲಿಕಾನ್ ಸಿಟಿಯ ಆಸ್ಪತ್ರೆಗೆ ಜ್ಯೋತಿಯವರನ್ನು ದಾಖಲಿಸಿದ್ದರು.
ಚಿಕಿತ್ಸೆ ಫಲಕಾರಿಯಾಗದೆ ಜ್ಯೋತಿ ಅವರು ಸೋಮವಾರ ಮೃತಪಟ್ಟಿದ್ದಾರೆ.