ಧಾರವಾಡ prajakiran.com :
ಧಾರವಾಡ ಜಿಲ್ಲೆಯ ಜಿಪಂ ಸದಸ್ಯ ಯೋಗೀಶ್ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡದ ಮೂರನೇ ಹೆಚ್ಚುವರಿ ಹಾಗೂ ಸಿಬಿಐ ವಿಶೇಷ ನ್ಯಾಯಾಲಯಕ್ಕೆ
ಸಿಬಿಐ ಅಧಿಕಾರಿಗಳು ಸುಳ್ಳು ಪತ್ತೆ ಪರೀಕ್ಷೆಗೆ ಅರ್ಜಿ ಸಲ್ಲಿಸಿದರು.
ಈ ಸಂಬಂಧ ಶುಕ್ರವಾರ ನ್ಯಾಯಾಲಯ ದ ಮುಂದೆ ವಿಚಾರಣೆ ಗೆ ಹಾಜರಾದ
ಮಾಜಿ ಸಚಿವ ವಿನಯ ಕುಲಕರ್ಣಿ ಸಹೋದರ ವಿಜಯ ಕುಲಕರ್ಣಿ, ಸೋದರ ಮಾವ ಚಂದ್ರಶೇಖರ ಇಂಡಿ ಅಲಿಯಾಸ್ ಚಂದು ಮಾಮ
ಹಾಗೂ ವಿನಯ ಸಚಿವರಾಗಿದ್ದಾಗ ಅವರ ಆಪ್ತ ಕಾರ್ಯದರ್ಶಿಯಾಗಿದ್ದ ಸೋಮಲಿಂಗ ನ್ಯಾಮಗೌಡ ವಿಚಾರಣೆಗೆ ಹಾಜರಾದರು.
ಸಿಬಿಐ ವಿಶೇಷ ನ್ಯಾಯಾಲಯ ನೋಟಿಸ್ ನೀಡಿದ್ದ ಹಿನ್ನೆಲೆ ಕೋರ್ಟ್ ಗೆ ಆಗಮಿಸಿದ ಮೂವರೂ ಮೊದಲಿಗೆ ಕೋರ್ಟ್ ಆವರಣದಲ್ಲಿ ಕೊವಿಡ್ ಟೆಸ್ಟ್ ಮಾಡಿಸಿಕೊಂಡರು.
ಸಿಬಿಐ ಮೂವರನ್ನೂ ಸುಳ್ಳು ಪತ್ತೆ ಪರೀಕ್ಷೆಗೆ ಒಳಪಡಿಸಲು ಅನುಮತಿ ಕೇಳಿರೋ ಹಿನ್ನೆಲೆಯಲ್ಲಿ ಮೂವರಿಗೂ ಖುದ್ದು ಹಾಜರಾಗುವಂತೆ ಕೋರ್ಟ್ ಸೂಚನೆ ನೀಡಿತ್ತು.
ಕೋರ್ಟ್ ಸೂಚನೆ ಮೇರೆಗೆ ಮೂವರು ಕೋರ್ಟ್ ಗೆ ಆಗಮಿಸಿದ್ದರು.
ಮೂವರು ಸುಳ್ಳು ಪತ್ತೆ
ಪರೀಕ್ಷೆಗೆ ನಿರಾಕರಿಸಿದರು. ಹೀಗಾಗಿ
ಸಿಬಿಐ ಕೋರ್ಟ್ ಕೂಡ ಈ ಅರ್ಜಿಯನ್ನು ಪರಿಗಣಿಸಲಿಲ್ಲ.
ಈ ಹಿಂದೆ ಸಿಬಿಐ ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಸುಳ್ಳು ಪತ್ತೆ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದನ್ನು ಇಲ್ಲಿ ಸ್ಮರಿಸಬಹುದು.