ಚಿತ್ರದುರ್ಗ prajakiran. com : ಚಿತ್ರದುರ್ಗದ ಮುರುಘಾಮಠದ ಶಿವಮೂರ್ತಿ ಶರಣರ ಮೇಲೆ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.
ನೋಂದ ಮಕ್ಕಳ ದೂರಿನ ಆಧಾರದ ಮೇಲೆ ಮೈಸೂರಿನ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಚಂದ್ರಕುಮಾರ್ ಸಿ. ಈ ಪ್ರಕರಣ ದಾಖಲಿಸಿದ್ದಾರೆ.
ಮೈಸೂರಿನ ನಜರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಒಬ್ಬ ಬಾಲಕಿಗೆ ಜನವರಿ 2019ರಿಂದ ಜೂನ್ 2022ರವರೆಗೆ ಸತತ ಮೂರುವರೆ ವರ್ಷಗಳಿಂದ ಲೈಂಗಿಕ ದೌರ್ಜನ್ಯ ಎಸಗಿದ ಗಂಭೀರವಾದ ಆರೋಪ ಮಾಡಿದ್ದರೆ,ಇನ್ನೊಬ್ಬ ಬಾಲಕಿಗೆ ಒಂದೂವರೆ ವರ್ಷ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ದೂರಿನಲ್ಲಿ ದಾಖಲಿಸಲಾಗಿದೆ.
ಮಠದ ಶಾಲೆಯೊಂದರಲ್ಲಿ ಓದುತ್ತಿರುವ ಹತ್ತನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರು ಮಠದ ಆವರಣದಲ್ಲಿ ಇರುವ ವಸತಿ ನಿಲಯದಲ್ಲಿ ವಾಸಿಸುತ್ತಿದ್ದು, ಇದಕ್ಕೆ ವಾರ್ಡನ್ ರಶ್ಮಿ, ಕಿರಿಯ ಸ್ವಾಮಿಜಿ ಬಸವಾದಿತ್ಯ, ವಕೀಲ ಗಂಗಾಧರಯ್ಯ ಹಾಗೂ ಲೀಡರ್ ಪರಮಶಿವಯ್ಯ ಸಹಕರಿಸಿದ್ದಾರೆ ಎಂದು ಅವರ ಹೆಸರನ್ನು ನಮೂದಿಸಲಾಗಿದೆ.
ಮೈಸೂರಿನ ಮಕ್ಕಳ ಕಲ್ಯಾಣ ಸಮಿತಿ ಎದುರು ಹಾಜರುಪಡಿಸಿ, ಅವರ ಆಪ್ತಸಮಾಲೋಚನೆ ನಡೆಸಲಾಗಿದ್ದು, ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ನೋಂದ ಮಕ್ಕಳು
ಮೈಸೂರಿನ ಒಡನಾಡಿ ಸಂಸ್ಥೆ ಮೊರೆ ಹೋಗಿದ್ದರು. ಹೀಗಾಗಿ ಪ್ರಕರಣ ಬಯಲಿಗೆ ಬಂದಿದೆ ಎಂದರೆ ತಪ್ಪಾಗಲಾರದು.