ವಿಜಯಪುರ prajakiran.com : ಪಿಪಿಇ ಕಿಟ್ ಧರಿಸಿ ಮಾನಸಿಕ ಅಸ್ವಸ್ಥನೊಬ್ಬ ಓಡಾಡಿದ ಘಟನೆ ಗುಮ್ಮಟನಗರಿ ವಿಜಯಪುರದಲ್ಲಿ ನಡೆದಿದೆ.
ವಿಜಯಪುರ ನಗರದ ಮನಗೂಳಿ ಅಗಸಿ ಬಳಿ ಈ ಘಟನೆ ಬೆಳಕಿಗೆ ಬಂದಿದ್ದು, ಈತ ಸ್ಮಶಾನದಲ್ಲಿ ಬಿಸಾಡಿರುವ ಪಿಪಿಇ ಕಿಟ್ ಧರಿಸಿ ಓಡಾಡಿದ್ದರಿಂದ ಸ್ಥಳೀಯರು ಕೆಲ ಕಾಲ ಆತಂಕಗೊಂಡಿದ್ದಾರೆ.
ಇತನ ವರ್ತನೆಯಿಂದ ಬೆಚ್ಚಿಬಿದ್ದ ಸ್ಥಳೀಯರು ಈ ಕುರಿತು ಆರೋಗ್ಯ ಸಹಾಯವಾಣಿ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ವಿಜಯಪುರದ ಜಲನಗರ, ಕೀರ್ತಿನಗರ ಬಡಾವಣೆಗಳ ಜನರಲ್ಲಿ ಆತಂಕ ಮನೆ ಮಾಡಿದ್ದು, ನೆರವಿಗೆ ಜಿಲ್ಲಾಡಳಿತ ಧಾವಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಇತ ಕಳೆದೆರಡು ದಿನಗಳಿಂದ ನಗರದಲ್ಲಿ ಓಡಾಡುತ್ತಿದ್ದರೂ ಯಾರೊಬ್ಬರು ಗಮನ ಹರಿಸದಿರುವುದು ಹಾಗೂ ಸ್ಮಶಾನದಲ್ಲಿ ಪಿಪಿಇ ಕಿಟ್ ಹಾಗೆ ಎಸೆದು ಹೋಗಿರುವದು ಸರಿಯಾದ ಬೆಳವಣಿಗೆಯಲ್ಲ ಎಂದು ಕೆಲವರು ಕಿಡಿಕಾರಿದ್ದಾರೆ.
ಕೋವಿಡ್ ನಿಯಮಾವಳಿ ಪ್ರಕಾರ ಮೃತ ಸೊಂಕಿತನ ಅಂತಿಮ ವಿಧಿ ವಿಧಾನ ನೆರವೇರಿಸಿದ ಬಳಿಕ ಪಿಪಿಇ ಕಿಟ್ ಅಲ್ಲಿಯೇ ಸುಟ್ಟು ಹಾಕಬೇಕು.
ಆದರೆ ಅದನ್ನು ಹಾಗೆಯೇ ಎಸೆದು ಹೋಗುತ್ತಿರುವ ಪ್ರಕರಣಗಳು ರಾಜ್ಯದಲ್ಲಿ ಮೇಲಿಂದ ಮೇಲೆ ಮರುಕಳುಹಿಸುತ್ತಿರುವುದು ನೋವಿನ ಸಂಗತಿಯಾಗಿದೆ ಎಂದು ಬೇಸರ ಹೊರ ಹಾಕಿದ್ದಾರೆ.