ರಾಜ್ಯ

ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗೆ ಬೆಳಗಾವಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಿ

ಬೆಂಗಳೂರು prajakiran.com : ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ ಬೆಳಗಾವಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಬೇಕು ಎಂದು ಆಗ್ರಹಿಸಿ ವಿವಿಧ ಹಿಂದೂ ಪರ ಸಂಘಟನೆಗಳ ನಿಯೋಗ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಬೇಟಿ ಮಾಡಿ ಸಮಾಲೋಚನೆ ನಡೆಸಿದ್ರು.

ಪ್ರಮೋದ್ ಮುತಾಲಿಕ್ ಹಿಂದೂತ್ವದ ವಿಚಾರಕ್ಕಾಗಿ ಮನೆ ಮಠ ಬಿಟ್ಟು ಸುದೀರ್ಘ ಸೇವೆ ಸಲ್ಲಿಸುತ್ತಿರುವ ಮಹಾನ್ ಸಾದ್ವಿ ಪ್ರಖರ ವಾಗ್ಮಿ ಯಾಗಿದ್ದಾರೆ.

ಹಿಂದೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಈ ಭಾರಿ ಅವರಿಗೆ ಬಿಜೆಪಿ ಬೆಳಗಾವಿ ಉಪ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನೀಡಲು ಹೈಕಮಾಂಡ್ ಜೋತೆ ಚರ್ಚೆ ಮಾಡಿ ಟಿಕೆಟ್ ನೀಡಲು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಒತ್ತಾಯಿಸಿದ್ದಾರೆ.

ಈ ಬಗ್ಗೆ ಮುಖಂಡರ ಜೊತೆಗೆ ಚರ್ಚಿಸುವುದಾಗಿ ಸಿಎಂ ನಿಯೋಗಕ್ಕೆ ಭರವಸೆ ನೀಡಿದರು ಎಂದು ತಿಳಿದುಬಂದಿದೆ.

ಪ್ರಮೋದ್ ಮುತಾಲಿಕ್ ಪರ ಒಲವು ಜಾಸ್ತಿ ಇರುವ ಹಿನ್ನೆಲೆಯಲ್ಲಿ ಈ ಭಾರಿ ಪ್ರಮೋದ್ ಮುತಾಲಿಕ್ ಅವರಿಗೆ ಬೆಳಗಾವಿ ಲೋಕಸಭೆ ಟಿಕೆಟ್ ನೀಡಲು ಹಿಂದೂ ಮುಖಂಡರು ಹಾಗೂ ಕಾರ್ಯಕರ್ತರು ಒತ್ತಾಯಿಸುತ್ತಿದ್ದು, ಅವರ ಪರವಾಗಿ ದಿನದಿಂದ ದಿನಕ್ಕೆ ಬೆಂಬಲ ಹೆಚ್ಚುತ್ತಲೇ ಇದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *