ಧಾರವಾಡ prajakiran.com : ಧಾರವಾಡ ಜಿಲ್ಲೆಯ ಜಿಪಂ ಸದಸ್ಯ ಯೋಗೀಶಗೌಡ ಗೌಡರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಬಂಧಿಸಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಆದಷ್ಟು ಬೇಗ ಬೆಳಗಾವಿಯ ಹಿಂಡಲಗಾ ಜೈಲಿನಿಂದ ಹೊರಬರಲಿ ಎಂದು ಪ್ರಾರ್ಥಿಸಿ, ಧಾರವಾಡದ ಷಾ ವಲಿ ಖಾದ್ರಿ ದರ್ಗಾದಲ್ಲಿ 5 ನೇ ವಾರ್ಡಿನ ಮುಸ್ಲಿಂ ಸಮುದಾಯದ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಶಫೀ ಕಳ್ಳಿಮನಿ, ಮುಸ್ತಾಕ್ ಶೇಖ ಸನದಿ, ಯೂನುಸ್ ಬರಗೆರ, ಹಾಶಿಂ ಮುಂಜಾವಿನಲಿ, ಹಾಗೂ ಗುರುಹಿರಿಯರು ಭಾಗವಹಿಸಿದ್ದರು.
ಇದೇ ವೇಳೆ ವಾರ್ಡ್ ನಂ 8 ಹಾಗೂ 9 ರ ವತಿಯಿಂದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಕಾಮನಕಟ್ಟಿ ಪ್ಯಾಟಿ ವೀರಭದ್ರೇಶ್ವರ ದೇವಸ್ಥಾನದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಬಿಡುಗಡೆಗೆ ಪ್ರಾರ್ಥಿಸಿ ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಸರೋಜಾ ಪಾಟೀಲ, ಬಸವರಾಜ ಜಾಧವ, ಗೌರಿ ನಾಡಗೌಡರ, ಸವಿತಾ ಕಟ್ಟಿ ಸೇರಿದಂತೆ ಅನೇಕ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.