ಧಾರವಾಡ prajakiran.com : ಧಾರವಾಡದ ಸಪ್ತಾಪುರದಲ್ಲಿರುವ ಸರ್ ಎಂ. ವಿಶ್ವೇಶ್ವರಯ್ಯ ಪಿಯು ಕಾಲೇಜಿನ ವಿದ್ಯಾರ್ಥಿನಿಗೆ
ಲೈಂಗಿಕ ಕಿರುಕುಳ ನೀಡಿದ ಪ್ರಕರಣ
ಸಂಬಂಧಿಸಿದಂತೆ ಸಂಸ್ಥೆ ಅಧ್ಯಕ್ಷ ಬಸವರಾಜ ಯಡಣ್ಣವರಿಗೆ ಸಾಥ್ ನೀಡಿದ ಆರೋಪಕ್ಕೆ ಗುರಿಯಾಗಿರುವ ಕಾಲೇಜು ಪ್ರಾಚಾರ್ಯರಾದ ಮಹಾದೇವ ಕುರುವತ್ತಿಗೌಡರನನ್ನು ಪೊಲೀಸರು ಬಂಧಿಸಿದ್ದಾರೆ.
ಧಾರವಾಡದ ಉಪನಗರದ ಪೊಲೀಸ್ ಠಾಣೆ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸುವ ಮೂಲಕ ಎ 2 ಆರೋಪಿಯ ಹೆಡೆಮುರಿ ಕಡ್ಟಿದ್ದಾರೆ
ಆದರೆ, ಎ1 ಆರೋಪಿಯಾಗಿರುವ ಕಾಲೇಜು ಅಧ್ಯಕ್ಷ ಬಸವರಾಜ ಯಡಣ್ಣವರ ಇನ್ನು ಪತ್ತೆಯಾಗಿಲ್ಲ
ಆತ ತಲೆ ಮರೆಸಿಕೊಂಡಿದ್ದು, ಆತನ ಹುಡುಕಾಟಕ್ಕೆ ಪೊಲೀಸರು ವಿವಿಧ ಕಡೆಗಳಲ್ಲಿ ಜಾಲ ಬೀಸುತ್ತಿದ್ದಾರೆ.
ಇತ ಕಳೆದ ಒಂದು ವರ್ಷದಲ್ಲಿ ಅನೇಕ ವಿದ್ಯಾರ್ಥಿನಿಯರ ಜೊತೆಗೆ ಈತ ಅನುಚಿತವಾಗಿ ವರ್ತಿಸಿದಲ್ಲದೆ, ಸ್ಪಂದಿಸದವರಿಗೆ ಅನಗತ್ಯವಾಗಿ ಕಿರುಕುಳ ಕೊಡುತ್ತಿದ್ದ ಎಂಬ ಆರೋಪ ಕೇಳಿ ಬಂದಿದೆ.
ಈ ಬಗ್ಗೆ ಕೂಡ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಲಾಭುರಾವ್ ಅವರು ಸಮಗ್ರ ತನಿಖೆ ನಡೆಸಿ, ಆತನ ವಿರುದ್ಧ ಕಟ್ಟು ನಿಟ್ಟಿನ ಕ್ರಮ ಜರುಗಿಸಲು ಹಲವು ಪೋಷಕರು ಒತ್ತಾಯಿಸಿದ್ದಾರೆ.