ಬೀದಿ ಬದಿಯ ವ್ಯಾಪಾರಿಗಳಿಗೆ ಕಿರುಕುಳ
ಜಯ ಕರ್ನಾಟಕ ಜನಪರ ವೇದಿಕೆ ಪ್ರತಿಭಟನೆ
ಧಾರವಾಡ prajakiran.com : ಕಾಯಿಪಲ್ಲೆ ಹಾಗೂ ಹಣ್ಣು ವ್ಯಾಪಾರ ಮಾಡುವ ಬೀದಿ ಬದಿಯ ವ್ಯಾಪಾರಿಗಳಿಗೆ ಶ್ರೀನಗರ ವೃತ್ತ ಹಾಗೂ ಸಪ್ತಾಪುರ ಸೇರಿದಂತೆ ವಿವಿಧ ಕಡೆಗಳಲ್ಲಿ ವ್ಯಾಪಾರ ಮಾಡುವ ಬಡ ರೈತರು ಹಾಗೂ ವ್ಯಾಪಾರಿಗಳಿಗೆ ಮಹಾನಗರ ಪಾಲಿಕೆ ಕೆಲ ಅಧಿಕಾರಿಗಳು ದಬ್ಬಾಳಿಕೆ ನಡೆಸುತ್ತಿದ್ದಾರೆ.
ಕೂಡಲೇ ಅವರು ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಬೀದಿ ಬದಿ ವ್ಯಾಪಾರಸ್ಥರಿಗೆ ಸೂಕ್ತ ವ್ಯಾಪಾರ ನಡೆಸಲು ಜಾಗದ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಕಚೇರಿ ಎದುರು ಜಯ ಕರ್ನಾಟಕ ಜನಪರ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಿ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿದರು.
ಬಡ ಜನರು ಸರಿ ಸುಮಾರು 2, ವರ್ಷಗಳಿಂದ ಬೀದಿಯಲ್ಲಿ ತರಕಾರಿ ಹಾಗೂ ಹಣ್ಣುಗಳ ವ್ಯಾಪಾರ ಮಾಡುತ್ತಿದ್ದಾರೆ
ಆದರೆ ಅಧಿಕಾರಿಗಳು ರಾಜಕೀಯ ಮುಖಂಡರ ಮಾತು ಕೇಳಿ ವ್ಯಾಪಾರಸ್ಥರಿಗೆ ಕಿರುಕುಳ ನೀಡುತ್ತಿದ್ದಾರೆ.
ನೀವು ಇಲ್ಲಿ ವ್ಯಾಪಾರ ಮಾಡಬೇಡಿ ಎಂದು ತೊಂದರೆ ಕೊಡುತ್ತಿದ್ದಾರೆ ಕೂಡಲೇ ಮಹಾನಗರ ಪಾಲಿಕೆ ಈ ಕುರಿತು ಗಮನ ಹರಿಸಬೇಕು
ಬಡ ಜನರಿಗೆ ತರಕಾರಿ ವ್ಯಾಪಾರ ಮಾಡಲು ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು
ಈ ಸಂದರ್ಭದಲ್ಲಿ ಜಯ ಕರ್ನಾಟಕ ಜನಪರ ವೇದಿಕೆ ವೇದಿಕೆಯ ರಾಜ್ಯ ಉಪಾಧ್ಯಕ್ಷರಾದ ಮುತ್ತು ಬೆಳ್ಳಕ್ಕಿ, ಜಿಲ್ಲಾ ಉಪಾಧ್ಯಕ್ಷರಾದ ಜಗದೀಶ್ ಜಾದವ, ಕಮಲು ಪೂಲವಾಲೆ, ಸುರೇಶ ಮಾಡರಗಿ, ಮಂಜು ಅಂಗಡಿ, ಎಲ್ಲಪ್ಪ ತಳವಾರಾ, ಗಂಗವ್ವ ಬೆಳಗಟ್ಟಿ, ಅಣ್ಣಾಜಿ ಬಿರಾದಾರ, ರವಿ ಕಪಾಸೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.