ಧಾರವಾಡ Prajakiran.com : ದೆಹಲಿಯಲ್ಲಿ ರೈತರು ಕೇಂದ್ರ ಸರ್ಕಾರ ಜಾರಿ ತಂದಿರುವ ಕಾನೂನು ವಿರೋಧಿಸಿ ಹೋರಾಟ ಮಾಡುತ್ತಾ ಇದ್ದಾರೆ ಆದ್ರೇ ಕೇಂದ್ರ ಸರ್ಕಾರ ಕಣ್ಮುಚ್ಚಿ ಕುಳಿತಿದೆ ಎಂದು ಆರೋಪಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ರೈತ ಕೃಷಿ ಕಾರ್ಮಿಕ ಸಂಘಟನೆ ವತಿಯಿಂದ ರೈತ ಚೈತನ್ಯ ಕಾರ್ಯಕ್ರಮ ಹಮ್ಮಿಕೊಂಡು ಪ್ರತಿಭಟನೆ ನಡೆಸಲಾಯಿತು.
ಕೇಂದ್ರ ಸರ್ಕಾರ ಜಾರಿ ತಂದಿರುವ ಕಾನೂನು ಕೂಡಲೇ ವಾಪಸ್ ಪಡೆಯಲು ರೈತ ಹೋರಾಟಗಾರರು ಆಗ್ರಹಿಸಿ ಕೇಂದ್ರ ಸರ್ಕಾರ ವಿರುದ್ಧ ಘೋಷಣೆ ಕೂಗಿ ಕಾರ್ಯಕ್ರಮದ ಉದ್ದಕ್ಕೂ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ರೈತರ ಪರವಾಗಿ ಇರಬೇಕಾಗಿದ್ದ ಸರ್ಕಾರ ರೈತ ವಿರೋಧಿ ಕಾನೂನು ಜಾರಿಗೆ ತರುತ್ತಿರುವುದು ವಿಷಾದನೀಯ ರೈತರ ಶಾಲು ಹಾಕಿಕೊಂಡು ಎಲ್ಲರು ಡೊಂಗಿ ರಾಜಕಾರಣ ಮಾಡುತ್ತಾರೆ ಎಂದು ರೈತ ಮುಖಂಡರು ವಾಗ್ದಾಳಿ ನಡೆಸಿದರು.