ಜಿಲ್ಲೆ

ಧಾರವಾಡದಲ್ಲಿ ಎಐಯುಟಿಯುಸಿ ಕಾರ್ಯಕರ್ತರ ಪ್ರತಿಭಟನೆ

ಧಾರವಾಡ Prajakiran.com : ರಾಷ್ಟ್ರ ರಾಜಧಾನಿಯಲ್ಲಿ ರೈತರು ಕಳೆದ 42 ದಿನಗಳಿಂದ ಹೋರಾಟ ಮಾಡುತ್ತಾ ಇದ್ದಾರೆ.

ಆದರೆ, ಕೇಂದ್ರ ಸರ್ಕಾರ ಅವರಿಗೆ ಸ್ಪಂದಿಸುವ ಕೆಲಸ ಮಾಡದಿರುವುದು ನೋಡಿದರೆ, ಬಂಡವಾಳ ಶಾಹಿಗಳ ಪರವಾದ ನೀತಿ ಜಾರಿಗೆ ತರುವುದು ಮೇಲ್ನೋಟಕ್ಕೆ ಕಂಡು ಬರುತ್ತದೆ ಎಂದು ಆರೋಪಿಸಿ ಧಾರವಾಡ ವಿವೇಕಾನಂದ ವೃತ್ತದಲ್ಲಿ ಎಐಯುಟಿಯುಸಿ (AIUTUC) ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ದೇಶಕ್ಕೆ ಅನ್ನ ನೀಡುವ ಅನ್ನದಾತನ ನೆರವಿಗೆ ಸರ್ಕಾರ ಬರಬೇಕಾಗಿತ್ತು. ಆದರೆ ಕೇಂದ್ರ ಸರ್ಕಾರ ಬಂಡವಾಳ ಶಾಹಿಗಳ ಪರವಾಗಿ ವಾಲಿದೆ. ಅದರ ನೀತಿ, ನಿರೂಪಣೆಗಳನ್ನು ನೋಡಿದರೆ ಸರ್ಕಾರ ರೈತ ಮರಣ ಶಾಸನ ವಾಗಿರುವ ಕಾಯ್ದೆ ಜಾರಿಗೆ ತರಲು ಮುಂದಾಗಿರುವುದು ಖಂಡನೀಯ ಎಂದು AIUTUC ಕಾರ್ಯಕರ್ತರು ಆರೋಪಿಸಿದರು.

ದೆಹಲಿಯಲ್ಲಿ ರೈತರ ಪ್ರತಿಭಟನೆ 42 ದಿನ ಕಳೆದರೂ ಸರ್ಕಾರ ಕ್ಯಾರೆ ಎನ್ನದಿರುವುದು ನೋವಿನ ಸಂಗತಿ.

ಈ ಹಿನ್ನೆಲೆಯಲ್ಲಿ ರೈತರ ಹೋರಾಟ ಬೆಂಬಲಿಸಿ ನಾವು ನಿಮ್ಮೊಂದಿಗೆ ಇದ್ದೇವೆ ಎಂಬ ಘೋಷ ವಾಕ್ಯದೊಂದಿಗೆ ಪ್ರತಿಭಟನೆ ಮಾಡಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *