ಧಾರವಾಡ prajakiran.com : ಎಪಿಎಂಸಿ ಕಾಯ್ದೆ ತಿದ್ದುಪಡಿ ಸೇರಿದಂತೆ, ರೈತ ವಿರೋಧಿ ನೀತಿಗಳನ್ನು ಹಿಂಪಡೆಯಬೇಕು ಎಂದು ಅಗ್ರಹಿಸಿ, ದೆಹಲಿಯಲ್ಲಿ ನಡೆಯಿತ್ತಿರುವ ಪ್ರತಿಭಟನೆಗೆ ಬೆಂಬಲಿಸಿ ಧಾರವಾಡದಲ್ಲಿ ರೈತರು ರಸ್ತೆ ತಡೆ ನಡೆಸಿದರು.
ಕರ್ನಾಟಕ ರಾಜ್ಯ ರೈತ ಸಂಘಟನೆ ನೇತೃತ್ವದಲ್ಲಿ, ಧಾರವಾಡದ ನರೇಂದ್ರ ಬಳಿ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ರಸ್ತೆ ನಡೆಸಿದ ರೈತರು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.
ಕಳೆದ ಮೂರು ದಿನಗಳಿಂದ ದೇಶಕ್ಕೆ ಅನ್ನ ನೀಡುವ ರೈತರು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಆದರೆ ಕೇಂದ್ರ ಸರ್ಕಾರಕ್ಕೆ ನಮ್ಮ ರೈತರ ಕೂಗು ಕೇಳಿಸಿಯು, ಕೇಳದಂತೆ ನಡೆದುಕೊಳ್ಳುತ್ತಿದೆ ಎಂದು ಆರೋಪಿಸಿದರು.
ರೈತರಿಗೆ ಎಪಿಎಂಸಿ ಕಾಯ್ದೆಯು ಮರಣ ಶಾಸನವಾಗಿದ್ದು, ಕೇಂದ್ರ ಸರ್ಕಾರ ಅದನ್ನು ಹಿಂದಕ್ಕೆ ಪಡೆಯಬೇಕು. ಹಾಗೂ ರೈತ ವಿರೋಧಿ ನೀತಿಗಳನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಅಗ್ರಹಿಸಿದರು.
ಒಂದು ವೇಳೆ ಕೇಂದ್ರ ಸರ್ಕಾರ ಹೀಗೆ ತನ್ನ ಮೊಂಡಾಟವನ್ನು ಮುಂದುವರೆಸಿದರೆ, ಮುಂದೊಂದು ದಿನ ದೇಶದ ಎಲ್ಲ ರೈತರು ದೆಹಲಿಗೆ ತೆರಳಿ ಪ್ರತಿಭಟನೆ ನಡೆಸುತ್ತಾರೆ ಎಂದು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.