ಜಿಲ್ಲೆ ರಾಜ್ಯ

ಧಾರವಾಡ ರೈತರ 21 ದಿನಗಳ ಸರಣಿ ಸತ್ಯಾಗ್ರಹಕ್ಕೆ ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಬೆಂಬಲ

ಧಾರವಾಡ Prajakiran.com : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರಿಗೆ ಇರುವ ಮಹಾತ್ಮ ಗಾಂಧಿ ಪ್ರತಿಮೆ ಮುಂದೆ ರೈತ ಹಿತರಕ್ಷಣಾ ಪರಿವಾರದವರು ನಿರಂತರ 21 ದಿನಗಳಿಂದ ನಡೆಸುತ್ತಿರುವ ಧರಣಿಗೆ ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಬೆಂಬಲ ಸೂಚಿಸಿದರು.

ಭೂ ಸುಧಾರಣಾ ತಿದ್ದುಪಡಿ ಹಾಗೂ ಎಪಿಎಂಸಿ ತಿದ್ದುಪಡಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಧರಣಿಗೆ ಸರ್ಕಾರ ಸ್ಪಂದಿಸದೇ ಇರುವುದು ದುರದೃಷ್ಟಕರ.

ಈ ಕಾಯ್ದೆಗಳನ್ನು ಸರ್ಕಾರ ಕೂಡಲೇ ವಾಪಸ್ ಪಡೆಯಬೇಕು. ಈ ಕಾಯ್ದೆಗಳು ರೈತರಿಗೆ ಮರಣ ಶಾಸನವಾಗಲಿವೆ ಎಂದು ಉಗ್ರಪ್ಪ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಕೆಪಿಸಿಸಿ ಮಾದ್ಯಮ ವಿಶ್ಲೇಷಕ ಪಿ.ಎಚ್.ನೀರಲಕೇರಿ, ರೈತ ಮುಖಂಡ ಶ್ರೀಶೈಲಗೌಡ ಕಮತರ, ಲಕ್ಷ್ಮಣ ಬಕ್ಕಾಯಿ, ಎ ಎಸ್ ಪಾಟೀಲ, ಶಿವಾನಂದ ಹಾದಿಮನಿ ಸೇರಿದಂತೆ ಅನೇಕರು ಉಪವಾಸ ಸರಣಿ ಸತ್ಯಾಗ್ರಹದಲ್ಲಿ ಭಾಗವಹಿಸಿದ್ದರು. 

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *