ಧಾರವಾಡ prajakiran.com : ಜೋಡಿ ಶ್ವಾನಗಳೊಂದಿಗೆ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ವಿಭಿನ್ನ ಪ್ರತಿಭಟನೆ ನಡೆಸಿದ ಘಟನೆ ವಿದ್ಯಾನಗರಿ ಧಾರವಾಡದಲ್ಲಿ ನಡೆದಿದೆ.
ಕುರುಬ ಸಮುದಾಯದ ಮುಖಂಡರು ಎರಡು ಶ್ವಾನಗಳ ಸಮೇತ ಪ್ರತಿಭಟನೆ ಮಾಡಿ ರಾಜ್ಯ ಸರಕಾರದ ಗಮನ ಸೆಳೆದರು.
ಧಾರವಾಡದ ಸಂಗೊಳ್ಳಿ ರಾಯಣ್ಣ ಫೌಂಡೇಶನ್ ಮತ್ತು ಸಾಮ್ರಾಟ್ ಚಂದ್ರಗುಪ್ತ ಮೌರ್ಯ ಕುರುಬರ ನೌಕರರ ಸಂಘದಿಂದ ಈ ವಿನೂತನ ಪ್ರತಿಭಟನೆ ನಡೆದಿದೆ.
ಕುರುಬ ಸಮುದಾಯದ ಗೋಂಡ, ರಾಜಗೋಂಡ, ಕಾಡು ಕುರುಬ, ಜೇನು ಕುರುಬ, ಬೆಟ್ಟ ಕುರುಬ ಸೇರಿದಂತೆ ಕೊಡಗು ಜಿಲ್ಲೆಯ ಕುರುಬ ಸಮುದಾಯ ಪರಿಶಿಷ್ಟ ಪಂಗಡದ ಸೌಲಭ್ಯ ಪಡೆಯುತ್ತಿದ್ದಾರೆ. ಆದರೆ ಉತ್ತರ ಕರ್ನಾಟಕದ 7 ಜಿಲ್ಲೆಗಳ ಸಮುದಾಯ ವಂಚಿತವಾಗಿದೆ ಎಂದು ಆರೋಪಿಸಿದರು.
ಇದಲ್ಲದೆ, ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಬಿ.ಎಸ್. ಯಡಿಯೂರಪ್ಪಅವರ ಸರಕಾರಅಧಿಕಾರಕ್ಕೆ ಬರಲು ಕಾರಣಿಕರ್ತರಾದ ಮಾಜಿ ಸಚಿವ ಎಚ್. ವಿಶ್ವನಾಥಅವರಿಗೆ ಸಚಿವ ಸ್ಥಾನ ನೀಡಬೇಕು.
ಹುಬ್ಬಳ್ಳಿಯಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಗೋಳ್ಳಿ ರಾಯಣ್ಣನ ಹೆಸರಿಡಬೇಕು ಹಾಗೂ ಕುರುಬರಿಗೆ ಕೂಡ ಮಾಸ್ಕ್ ಸ್ಯಾನಿಟೇಶರ್ ವಿತರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಈ ಪ್ರತಿಭಟನೆ ನಡೆಸಲಾಯಿತು.