ರಾಜ್ಯ

ಸಭಾಪತಿ ಬಸವರಾಜ ಹೊರಟ್ಟಿ ವಿರುದ್ದ ಜಾತಿ ನಿಂದನೆ ಪ್ರಕರಣ : ಇನ್ಸಪೆಕ್ಟರ್ ಶ್ರೀಧರ ಸತಾರೆ ಅಮಾನತು ರದ್ದುಗೊಳಿಸಲು ಆಗ್ರಹಿಸಿ ವಿವಿಧ ಸಂಘಟನೆಗಳ ಪ್ರತಿಭಟನೆ

ಧಾರವಾಡ prajakiran.com : ಸಭಾಪತಿ ಬಸವರಾಜ ಹೊರಟ್ಟಿ ಅವರ ವಿರುದ್ಧ ಪ್ರಕರಣ ದಾಖಲಾದ ಜಾತಿ ನಿಂದನೆ ಪ್ರಕರಣದಲ್ಲಿ ಅಮಾಯಕ ದಕ್ಷ ಪೊಲೀಸ್ ಅಧಿಕಾರಿಯನ್ನ ಅಮಾನತುಗೊಳಿಸಲಾಗಿದೆ ಎಂದು ಆರೋಪಿಸಿ ದಲಿತ ಸಂಘರ್ಷ ಸಮಿತಿ, ಜಯ ಕರ್ನಾಟಕ ಸಂಘಟನೆ, ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಹಾಗೂ ವಿವಿಧ ಸಂಘಟನೆಯ ಮುಖಂಡರು ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಭಾನುವಾರ ಧಾರವಾಡ ಗ್ರಾಮೀಣ ಪೊಲೀಸ್ ಠಾಣೆ ಎದುರು ಹಾಗೂ ಸೀಮವಾರ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದರು ಪ್ರತಿಭಟನೆ ನಡೆಸಿ, ಸರಕಾರದ ನಡೆ ವಿರುದ್ದ ಘೋಷಣೆ ಕೂಗಿದರು.

ಧಾರವಾಡ ಗ್ರಾಮೀಣ ಠಾಣೆಯ ಇನ್ಸಪೆಕ್ಟರ್ ಶ್ರೀಧರ ಸತಾರೆ ಅವರನ್ನ ದುರುದ್ದೇಶಪೂರ್ವಕವಾಗಿ ಅಮಾನತು ಮಾಡಲಾಗಿದೆ.

ಈ ಆದೇಶವನ್ನ ಹಿಂದೆ ಪಡೆಯದೇ ಹೋದರೆ ಹೋರಾಟವನ್ನ ತೀವ್ರಗೊಳಿಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

ಬಳಿಕ ಜಿಲ್ಲಾಧಿಕಾರಿಗೂ ಮನವಿ ಸಲ್ಲಿಸಿದ ಪ್ರತಿಭಟನೆಕಾರರು, 7 ದಿನಗಳ ಕಾಲಾವಕಾಶ ನೀಡುತ್ತೇವೆ. ಅಮಾನತು ಹಿಂದೆ ಪಡೆಯದೇ ಹೋದರೆ ಹೋರಾಟವನ್ನ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದ್ದಾರೆ.‌

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *