ರಾಜ್ಯ

ಪಿ ಎಸ್ ಐ ಹುದ್ದೆ ನೇರ ನೇಮಕಾತಿ ಅರ್ಜಿ ಸ್ವೀಕಾರ ಸ್ಥಗಿತ

ಬೆಂಗಳೂರು prajakiran.com : ಪೊಲೀಸ್  ಇಲಾಖೆಯಲ್ಲಿ ಖಾಲಿ ಇರುವ ಪೋಲಿಸ್ ಸಬ್ ಇನ್ಸ್‌ಪೆಕ್ಟರ್ ( ಸಿವಿಲ್ ) -431 ಮತ್ತು ಪೊಲೀಸ್  ಸಬ್  ಇನ್ಸ್‌ಪೆಕ್ಟರ್ ( ಸಿವಿಲ್, ಕಲ್ಯಾಣ ಕರ್ನಾಟಕ ) -125 ಹುದ್ದೆಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ ದಿನಾಂಕ 01/06/2020 ರಿಂದ 30 / 06 / 2020 ರವರೆಗೆ ಅರ್ಹ ಅಭ್ಯರ್ಥಿಗಳ ಅರ್ಜಿ ಸ್ವೀಕಾರಕ್ಕೆತಡೆ ಬಿದ್ದಿದೆ.

ಈ ಹಿಂದೆ ಈ ಕುರಿತು ದಿನಪತ್ರಿಕೆಗಳಲ್ಲಿ ಜಾಹೀರಾತು ಪ್ರಕಟಿಸಿ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಆದರೆ ಸರ್ಕಾರದ ಪತ್ರ ಸಂಖ್ಯೆ ಹೆಚ್‌ಡಿ / 84 ಪಿಪಿಎ / 2020 – ಪಿಎಸ್ -ಬಿ 28  ದಿನಾಂಕ 30/05/2020 ರಲ್ಲಿನ ಸೂಚನೆಯಂತೆ ಆಡಳಿತಾತ್ಮಕ ಕಾರಣಗಳಿಂದಾಗಿ ಅರ್ಜಿ ಆಹ್ವಾನದ ದಿನಾಂಕವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿರುತ್ತದೆ.

ಮುಂದಿನ ಅರ್ಜಿ ಆಹ್ವಾನ ದಿನಾಂಕಗಳನ್ನು ಅಭ್ಯರ್ಥಿಗಳ ಗಮನಕ್ಕೆ ತರಲಾಗುವುದು ಎಂದು   ಕರ್ನಾಟಕ ಪೊಲೀಸ್ ಇಲಾಖೆ ನೇಮಕಾತಿ ವಿಭಾಗದ ಮುಖ್ಯಸ್ಥರು ತಿಳಿಸಿದ್ದಾರೆ.

ಇದರಿಂದಾಗಿ ರಾಜ್ಯದ ಪಿಎಸ್ ಐ ಹುದ್ದೆಯ ನೂರಾರು ಆಕಾಂಕ್ಷಿಗಳಲ್ಲಿ ಭಾರೀ ನಿರಾಶೆ ಮೂಡಿಸಿದ್ದು, ಮತ್ತೆ ಯಾವಾಗ ಕರೆಯುತ್ತಾರೆಯೋ ಎಂಬ ಆತಂಕ ಮನೆ ಮಾಡಿದೆ.

 

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *