ಧಾರವಾಡ : ಪಿಎಸ್ ಐ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಘಟನೆ ಖಂಡಿಸಿ ನೂರಾರು ಪರೀಕ್ಷಾರ್ಥಿಗಳು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.
ಈ ಪರೀಕ್ಷೆ ವೇಳೆ ಬ್ಲೂ ಟೂತ್ ಸೇರಿದಂತೆ ಇನ್ನಿತರ ಹೈಟೆಕ್ ತಂತ್ರಜ್ಞಾನ ಬಳಸಿ ಪರೀಕ್ಷೆಯಲ್ಲಿ ಹಲವು ಸಬ್ ಇನ್ಸ್ಪೆಕ್ಟರ್ ಪರೀಕ್ಷಾರ್ಥಿಗಳು ಅಕ್ರಮ ಎಸಗಿ
ಪಾಸಾಗಿದ್ದಾರೆ ಎಂದು ಆರೋಪಿಸಿದರು.
ಕೂಡಲೇ ಈ ಕುರಿತು ಉನ್ನತ ಮಟ್ಟದ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ವಿದ್ಯಾರ್ಥಿಗಳು ಆಗ್ರಹಿಸಿದರು.
ಈ ಸಂದರ್ಭದಲ್ಲಿ ರವಿಶಂಕರ್, ಹರಿಪ್ರಸಾದ್, ಗುರು, ಸಂತೋಷ, ಶ್ರೀಧರ, ಮಲ್ಲಿಕಾರ್ಜುನ, ಶ್ರೀಕಾಂತ ಸೇರಿದಂತೆ ಹಲವು ಸಬ್ ಇನ್ಸ್ಪೆಕ್ಟರ್ ಪರೀಕ್ಷಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.