ಬೆಂಗಳೂರು prajakiran.com : 2020-21ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಜುಲೈ 5ನೇ ತಾರೀಖಿನವರೆಗೂ ನೀಡಬಾರದು ಎಂದು ಸರ್ಕಾರ ಮತ್ತು ಶಿಕ್ಷಣ ಇಲಾಖೆಗೆ ಹೈಕೋರ್ಟ್ ಸೂಚನೆ ನೀಡಿದೆ.
ಸರ್ಕಾರ ಸಮಗ್ರ ನಿರ್ಧಾರ ಕೈಗೊಳ್ಳುವವರೆಗೂ ತಡೆಯಾಜ್ಞೆ ಜಾರಿಯಲ್ಲಿರಲಿದೆ ಎಂದು ಹೈಕೋರ್ಟ್ ವಿಭಾಗೀಯ ಪೀಠ ಮಧ್ಯಂತರ ಆದೇಶ ಹೊರಡಿಸಿದೆ.
ಸರ್ಕಾರ ಕೋರ್ಟ್ ಮುಂದೆ 12 ತಜ್ಞರ ಸಮಿತಿ ರಚಿಸಿರುವುದಾಗಿ ಹೇಳಿಕೆ ನೀಡದೆ. 15 ದಿನದೊಳಗೆ ಸಮಿತಿ ವರದಿ ನೀಡಲಿದೆ ಎಂದು ಜಂಟಿ ನಿರ್ದೇಶಕ ಕೃಷ್ಣಪ್ಪ ಕೋರ್ಟ್ಗೆ ಮಾಹಿತಿ ನೀಡಿದ್ದಾರೆ.
ರಿಪೀಟರ್ಸ್ ಹಾಗೂ ಸಾಮಾನ್ಯ ವಿದ್ಯಾರ್ಥಿಗಳಿಗೆ ತಾರತಮ್ಯ ಬೇಡ. ಖಾಸಗಿ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ಅನಿವಾರ್ಯ ಎಂದು ಈ ವೇಳೆ ನ್ಯಾ.ಬಿ.ವಿ. ನಾಗರತ್ನ ನೇತೃತ್ವದ ಪೀಠ ಅಭಿಪ್ರಾಯ ಪಟ್ಟಿದೆ. ಇನ್ನು ವಿಚಾರಣೆಯನ್ನ ಜುಲೈ 5ಕ್ಕೆ ಮುಂದೂಡಲಾಗಿದೆ.
ಇನ್ನು ರಿಪೀಟರ್ಸ್ಗೂ ಅವರ ಪ್ರಥಮ ಪಿಯುಸಿ ಫಲಿತಾಂಶ ಪರಿಗಣನೆ ಸಾಧ್ಯವೇ.? ಅವಕಾಶವಿದ್ದರೆ ಅದನ್ನ ಬಳಸಿ ಅವರನ್ನು ಪಾಸ್ ಮಾಡಬಹುದೇ? ಆಗ ಇಬ್ಬರ ನಡುವೆ ತಾರತಮ್ಯ ತಡೆಯಬಹುದು ಎಂದು ಹೈಕೋರ್ಟ್ ವಿಭಾಗೀಯ ನ್ಯಾಯಪೀಠ ಅಭಿಪ್ರಾಯಪಟ್ಟಿದೆ.