education minister sureshkumar
ರಾಜ್ಯ

ಪ್ರಥಮ ಪಿಯುಸಿ ಪರೀಕ್ಷೆ ಮುಂದೂಡುವಂತೆ ಶಿಕ್ಷಣ ಸಚಿವರಿಗೆ ಪತ್ರ ಬರೆದ ಧಾರವಾಡದ ವಿದ್ಯಾರ್ಥಿ

ಧಾರವಾಡ prajakiran.com : ಧಾರವಾಡದ ಪ್ರಥಮ ಪಿಯುಸಿ ವಿದ್ಯಾರ್ಥಿ ಯೊಬ್ಬ ಪರೀಕ್ಷಾ ದಿನಾಂಕ ವನ್ನು ಮುಂದೂಡುವಂತೆ ಶಿಕ್ಷಣ ಸಚಿವ ಸುರೇಶಕುಮಾರ ಅವರಿಗೆ ಪತ್ರ ಬರೆದಿದ್ದಾನೆ.

ಅದರ ಪ್ರತಿ ಪ್ರಜಾಕಿರಣ.ಕಾಮ್ ಗೆ ಲಭ್ಯವಾಗಿದ್ದು, ಧಾರವಾಡದ ಶಮಂತ್ ಹಿರೇಮಠ ಎಂಬಾತನೇ ಪತ್ರ ಬರೆದ ವಿದ್ಯಾರ್ಥಿಯಾಗಿದ್ದು, ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಕಾಲೇಜು ಜೀವನ ರೂಪಿಸುಬ ಮೊದಲ ಮೆಟ್ಟಲಾಗಿದ್ದು, ವಿದ್ಯಾರ್ಥಿಗಳು ವಿಜ್ಞಾನ ವಿಭಾಗದ ವಿಷಯಗಳ ಕುರಿತು ಆಳವಾಗಿ ಅರಿತುಕೊಂಡು ಮುಂದೆ ಇಂಜಿನಿಯರಿಂಗ್ ಇಲ್ಲವೇ ವೈದ್ಯಕೀಯ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಬೇಕಾದ ಹಿನ್ನೆಲೆಯಲ್ಲಿ ಅವರಿಗೆ ಸ್ವಲ್ಪ ಮಟ್ಟಿಗೆ ಓದಲು ಹಾಗೂ ಓದಿದ ವಿಷಯವನ್ನು ‌ಮನನ ಮಾಡಿಕೊಳ್ಳಲು ಸಮಯಾವಕಾಶ ಬೇಕಾಗುತ್ತದೆ.

ಹೀಗಾಗಿ ಪರೀಕ್ಷಾ ದಿನಾಂಕ ವನ್ನು ಅವಸರದಲ್ಲಿ ನಿಗದಿ ಪಡಿಸದೆ ಸ್ವಲ್ಪ ದಿನಗಳ ಮಟ್ಟಿಗೆ ಮುಂದೂಡುವಂತೆ ಮನವಿ ಮಾಡಿದ್ದಾರೆ.

ಸವಿವರವಾದ ವಿಷಯವನ್ನು ಪ್ರಸ್ತಾಪಿಸಿದ್ದು, ಗೂಗಲ್ ಫಾರ್ಮ್ಸ್ ನಲ್ಲಿ ಕ್ಯಾಂಪೇನ್ ಮಾಡಿದ್ದಾನೆ.

ಈ ಅಭಿಯಾನದಲ್ಲಿ ನೀವು ಭಾಗವಹಿಸಲು ಈ ಫಾರ್ಮ್ ತುಂಬಿ

https://docs.google.com/forms/d/e/1FAIpQLSejG833pZ9JhStRZXaobG5WEqH9eu2pOG8O9zJp0kFd95XY_g/formResponse

ಅದಕ್ಕೆ ಬಹಳಷ್ಟು ವಿದ್ಯಾರ್ಥಿಗಳು ಹಾಗೂ ಪೋಷಕರು ಸಹಮತ ವ್ಯಕ್ತಪಡಿಸಿದ್ದಾರೆ.
ಇದಕ್ಕೆ ಶಿಕ್ಷಣ ಸಚಿವ ಸುರೇಶಕುಮಾರ ಕೂಡ ಸಕಾರಾತ್ಮಕವಾಗಿ ಸ್ಪಂದಿಸುವ ಭರವಸೆಯನ್ನು ನೀಡಿದ್ದಾರೆ.

ಮುಂಬರುವ ದಿನಗಳಲ್ಲಿ ರಾಜ್ಯದ ಪದವಿ ಪೂರ್ವ ಶಿಕ್ಷಣ ಇಲಾಖೆ ಯಾವ ರೀತಿಯ ನಿರ್ಧಾರವನ್ನು ಪ್ರಕಟಿಸಲಿದೆ ಎಂಬುದು ಕಾದು ನೋಡಬೇಕಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *