ರಾಜ್ಯ

ಭಾರೀ ಮಳೆಗೆ ಪುಣಾ -ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನಂ. 13 ತಾತ್ಕಾಲಿಕ ಬಂದ್

ಬೆಳಗಾವಿ prajakiran.com : ಬೆಳಗಾವಿ ಜಿಲ್ಲೆಯ ವೇದಗಂಗಾ ನದಿ ಉಕ್ಕಿ ಹರಿಯುತ್ತಿದೆ.

ಈ ಹಿನ್ನೆಲೆಯಲ್ಲಿ ಪುಣಾ -ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನಂ.13 ಅನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.

ವೇದಗಂಗಾ ನದಿಯು ನಿಪ್ಪಾಣಿಯ ಯಮಗರಣಿ ಬಳಿ ಉಕ್ಕಿ ಹರಿಯುತ್ತಿದೆ.
ಅದಕ್ಕಾಗಿ ಪೊಲೀಸರು ವಾಹನಗಳ ಮಾರ್ಗ ಬದಲಿಸಿದ್ದಾರೆ.

ಬೆಂಗಳೂರು, ತುಮಕೂರು, ದಾವಣಗೆರೆ, ಹರಿಹರ, ಹಾವೇರಿ, ಧಾರವಾಡದಿಂದ ಮುಂಬೈ ಪುಣಾಕ್ಕೆ ತೆರಳುವ ವಾಹನಗಳು ಈ ಮಾರ್ಗದಲ್ಲಿ ಬರದಂತೆ ಬೆಳಗಾವಿ ಜಿಲ್ಲೆಯ ಎಸ್ಪಿ ಲಕ್ಷ್ಣಣ ನಿಂಬರಗಿ ಮನವಿ ಮಾಡಿದ್ದಾರೆ. 

ಬದಲಾಗಿ ಹೊಸಪೇಟೆ-ವಿಜಯಪುರ, ಹುಬ್ಬಳ್ಳಿ-ವಿಜಯಪುರ ಮಾರ್ಗದಲ್ಲಿ ಸಂಚರಿಸುವಂತೆ ಸೂಚಿಸಿದ್ದಾರೆ.

ಹಿರೇಬಾಗೇವಾಡಿ ಮತ್ತು ಹತ್ತರಗಿ ಟೋಲ್ ಬಳಿಯೇ ವಾಹನಗಳನ್ನು ತಡೆ ಹಿಡಿಯಲಾಗುತ್ತಿದೆ ಎಂದು ತಿಳಿದುಬಂದಿದೆ.

ಮಹಾರಾಷ್ಟ್ರದಿಂದ ಬರುವ ಎಲ್ಲಾ ವಾಹನಗಳನ್ನು ಕೊಗನೋಳಿ ಬಳಿಯೇ ವಾಪಸ್ ಕಳುಹಿಸಲಾಗುತ್ತಿದೆ.

ಜೊತೆಗೆ ಬೆಳಗಾವಿ ಜಿಲ್ಲೆಯ ಬಹುತೇಕ ಪ್ರದೇಶಗಳಲ್ಲಿ ನಿರಂತರ ಮಳೆಯಾಗುತ್ತಿದೆ. ಇದರಿಂದಾಗಿ ಸಂಚಾರ ಹಾಗೂ ಸಂಪೂರ್ಣ ಜನಜೀವನ ಅಸ್ತವ್ಯಸ್ತಗೊಂಡಿದೆ.

ಅಥಣಿ, ಸಂಕೇಶ್ವರ, ಖಾನಾಪುರದಲ್ಲೂ ಭಾರಿ ಮಳೆಯಾಗುತ್ತಿದೆ. ಜಿಲ್ಲೆಯ ಬಹುತೇಕ
ನದಿಗಳು ಉಕ್ಕಿ ಹರಿಯುತ್ತಿವೆ. ಕೆಲವಡೆ ಸೇತುವೆಗಳು ಜಲಾವೃತಗೊಂಡಿವೆ. 

ಕೃಷ್ಣಾ ನದಿ ಪಾತ್ರದಲ್ಲಿ ಪ್ರವಾಹ ಹೆಚ್ಚಾದ ಕಾರಣ ಮುಖ್ಯಮಂತ್ರಿ ಯಡಿಯೂರಪ್ಪ ಬೆಳಗಾವಿ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ, ಪ್ರವಾಹ ಸಂಭವಿಸಬಹುದಾದ ನದಿ ಪಾತ್ರದ ಹಳ್ಳಿಗಳಲ್ಲಿ ಹೆಚ್ಚಿನ‌ ನಿಗಾ ವಹಿಸುವಂತೆ ಹಾಗೂ ಜನ ಜಾನುವಾರುಗಳ ಸುರಕ್ಷತೆಗೆ ಅಗತ್ಯ ಕ್ರಮ ವಹಿಸುವಂತೆ ಸೂಚನೆ ನೀಡಿದ್ದಾರೆ. 

ಸರ್ಕಾರದಿಂದ ಹೆಚ್ಚಿನ‌ ನೆರವು ಬೇಕಾದಲ್ಲಿ ಕೂಡಲೇ ಸಂಪರ್ಕಿಸುವಂತೆ ನಿರ್ದೇಶನ ನೀಡಿದ್ದಾರೆ.

ಜೊತೆಗೆ ಪ್ರವಾಹ ಪೀಡಿತ ಇತರೆ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೂ ಮುಖ್ಯಮಂತ್ರಿಗಳು ಸಂಪರ್ಕದಲ್ಲಿದ್ದು, ನಿರಂತರ ಮಾಹಿತಿಯನ್ನು ಪಡೆಯುತ್ತಿದ್ದಾರೆ. 

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *