ಬೆಂಗಳೂರು prajakiran.com : ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಆರೋಗ್ಯ ದಿಢೀರ್ ಆಗಿ ಕೈ ಕೊಟ್ಟಿದೆ.
ಇಂದು ಏಕಾಎಕಿ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ವಿಕ್ರಂ ಆಸ್ಪತ್ರೆಗೆ ಸೇರಿಸಲಾಗಿದೆ.
ಬೆಳಗ್ಗೆ ಜಿಮ್ ಮಾಡುವ ಸಂದರ್ಭದಲ್ಲಿ ಎದೆ ನೋವು ಕಾಣಿಸಿಕೊಂಡಿತ್ತು ಎಂದು ತಿಳಿದುಬಂದಿದೆ.
ಈ ಹಿನ್ನೆಲೆಯಲ್ಲಿ ಪುನೀತ್ ಅವರನ್ನು ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆ ವೇಳೆಗೆ ಅವರು ಬಹಳ ಬಳಲಿದ್ದರು.
ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಸದ್ಯದ ಮಾಹಿತಿ ಪ್ರಕಾರ ಪುನೀತ್ ರಾಜ್ ಕುಮಾರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.
ಆದರೆ ಸದ್ಯಕ್ಕೆ ಎನನ್ನು ಹೇಳಲಾಗದು ಎಂದು ವೈದ್ಯರು ವಿವರಿಸಿದ್ದಾರೆ.
ಈ ಬಗ್ಗೆ ಮಾಹಿತಿ ತಿಳಿಯುತ್ತಲೇ ಸಿಎಂ ಬಸವರಾಜ ಬೊಮ್ಮಾಯಿ ಅವರ ಕುಟುಂಬದ ಸದಸ್ಯರ ಜೊತೆಗೆ ಮಾತುಕತೆ ನಡೆಸಿದರು.
ಪುನೀತ ರಾಜಕುಮಾರ ಕುಟುಂಬ ಸದಸ್ಯರು ಹಾಗೂ ಅಭಿಮಾನಿಗಳು ಆತಂಕಗೊಂಡಿದ್ದು, ಕೆಲವರು ಕಣ್ಣೀರು ಹಾಕುತ್ತಿದ್ದರೆ, ಇನ್ನೂ ಕೆಲವರು ದೇವರ ಮೊರೆ ಹೋಗಿದ್ದಾರೆ.