ಧಾರವಾಡ prajakiran.com : 2011ರಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಒಪ್ಪಿಕೊಂಡ ಹಿನ್ನಲೆಯಲ್ಲಿ ಆರೋಪಿಗೆ ಧಾರವಾಡದ ನ್ಯಾಯಾಲಯ ಸಾದಾ ಶಿಕ್ಷೆ ವಿಧಿಸಿ ಮಹತ್ವದ ಆದೇಶ ಹೊರಡಿಸಿದೆ.
ಧಾರವಾಡದ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2011ರಲ್ಲಿ ನಡೆದಿದ್ದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಗುನ್ನಾ ನಂಬರ 221/11 ದೂರು ದಾಖಲಾಗಿತ್ತು.
ಈ ಹಿನ್ನಲೆಯಲ್ಲಿ ಆರೋಪಿ ಜಾವೀದ ದಲಾಯತ ಶಿಕ್ಷೆಗೆ ಗುರಿಯಾಗಿದ್ದಾನೆ. ಇತ ತಮ್ಮ ವಕೀಲರ ಮೂಲಕ ನ್ಯಾಯಾಲಯಕ್ಕೆ ತಪ್ಪೋಪ್ಪಿಗೆ ಅರ್ಜಿ ಸಲ್ಲಿಸಿದ್ದ.
ಈ ಹಿನ್ನಲೆಯಲ್ಲಿ ಧಾರವಾಡದ ಪ್ರಧಾನ ಸಿಜೆ ಮತ್ತು ಜೆ.ಎಮ್ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶರಾದ ಕುರಣಿಕಾಂತ ದಾಕು ರವರು ಕಲಂ: 380, 457, 511 ಪ್ರಕಾರ ಎರಡು ವರ್ಷ ಐದು ತಿಂಗಳು ಸಾದಾ ಜೈಲು ಶಿಕ್ಷೆ ಮತ್ತು 3500/- ರೂಪಾಯಿ ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.