ಬೆಂಗಳೂರು prajakiran.com : ಮಹಾಮಾರಿ ಕೊರೋನಾ ದೋಂಕಿನಿಂದ ಇಡೀ ದೇಶವೇ ಸಂಕಷ್ಟದಲ್ಲಿದೆ.
ಅಲ್ಲದೆ ಜನರ ಮನರಂಜನೆಗೆ ಕಷ್ಟಟಡುವ ಚಿತ್ರರಂಗದ ಜನರಿಂದು ಕೆಲಸವಿಲ್ಲದೆ ಸಂಕಷ್ಟದಲ್ಲಿದ್ದಾರೆ.
ಅಂತವರಿಗೆ ದೊಡ್ಮನೆ ಹುಡ್ಗ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಕೂಡ ಸಹಾಯಕ್ಕೆ ನಿಂತಿದ್ದು, ಸಿನಿಮಾ ಕಾರ್ಮಿಕರ ಒಕ್ಕೂಟಕ್ಕೆ 10 ಲಕ್ಷ ರೂಪಾಯಿ ನೀಡುವ ಘೋಷಣೆ ಮಾಡಿದ್ದಾರೆ.
ಸಂಕಷ್ಟದಲ್ಲಿರುವ ಸಿನಿಮಾ ಮಂದಿ ಸಹಾಯಕ್ಕೆ ನಿಲ್ಲುತ್ತಿದ್ದೇನೆ. 10 ಲಕ್ಷ ರೂಪಾಯಿ ಹಣದಲ್ಲಿ ಸಿನಿಮಾ ಇಂಡಸ್ಟ್ರಿಯ ಎಲ್ಲಾ ವಿಭಾಗಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ವಿತರಿಸಲು ಸೂಚಿಸಿದ್ದೇನೆ ಎಂದು ಹೇಳಿದ್ದಾರೆ.