ಧಾರವಾಡ ಪ್ರಜಾಕಿರಣ.ಕಾಮ್ : ಧಾರವಾಡ ತಾಲೂಕಿನ ತಿಮ್ಮಾಪೂರ ಗ್ರಾಮದಿಂದ ಬಳ್ಳೂರು ಗ್ರಾಮಕ್ಕೆ ತೆರಳುತ್ತಿದ್ದ ಮದುವೆ ವಾಹನವೊಂದು ಪಲ್ಟಿಯಾದ ಪರಿಣಾಮ 20 ಜನರಿಗೆ ಗಂಭೀರ ಗಾಯಗಳಾಗಿವೆ.
ಶಿರೂರು ಮತ್ತು ಗುಮ್ಮಗೋಳ ಗ್ರಾಮದ ಮಧ್ಯೆ ಈ ಘಟನೆ ನಡೆದಿದೆ.
ಕ್ಯಾಂಟರ್ ನಲ್ಲಿ 50 ಜನರು ಪ್ರಯಾಣ ಮಾಡುತ್ತಿದ್ದರು,
ಆದರೆ ಅದೃಷ್ಟವಶಾತ್ ಭಾರೀ ಅನಾಹುತವೊಂದು ತಪ್ಪಿದೆ ಎಂದು ಅನೇಕರು ನಿಟ್ಟಿಸಿರು ಬಿಟ್ಟಿದ್ದಾರೆ.
ಕುಡಿದ ಅಮಲಿನಲ್ಲಿ ಕ್ಯಾಂಟರ್ ಚಲಾಯಿಸುತ್ತಿದ್ದ ವಾಹನ ಪಲ್ಟಿಯಾದ ಪರಿಣಾಮ ವಾಹನದಲ್ಲಿ ಮದುವೆ ಸಂಭ್ರಮದಲ್ಲಿದ್ದ ಹಿರಿಯ ಜೀವಗಳು ಕೆಲಕಾಲ ಕಂಗಾಲಾಗಿದ್ದರು.
ಗಾಯಾಳುಗಳನ್ನು ಧಾರವಾಡ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ.
ನವಲಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.