ಬಳ್ಳಾರಿ prajakiran.com : ಪೊಲೀಸ್ ಠಾಣೆಯ ಎದುರೇ ಎರಡು ಗುಂಪುಗಳು ಪರಸ್ಪರ ಹೊಡೆದಾಡಿಕೊಂಡ ಘಟನೆ ಬಳ್ಳಾರಿ ಜಿಲ್ಲೆಯ ಹೂವಿನ ಹಡಗಲಿಯಲ್ಲಿ ನಡೆದಿದೆ.
ಭಾನುವಾರ ಎರಡು ಗುಂಪುಗಳು ಪರಸ್ಪರ ದೂರು ಪ್ರತಿ ದೂರು ನೀಡಲು ಬಂದಿದ್ದವು. ಈ ವೇಳೆ ಅವಾಚ್ಯ ಶಬ್ದಗಳ ನಿಂದನೆ ಮಾಡಿಕೊಂಡಅವರು ಕೈ ಕೈ ಮಿಲಾಯಿಸಿದ್ದಾರೆ.
ಇದರಿಂದಾಗಿ ಒಬ್ಬನಿಗೆ ಗಂಭೀರ ಗಾಯವಾಗಿದ್ದು, ಆತನನ್ನು ಪೊಲೀಸರೇ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಅಲ್ಲದೆ, ಘಟನೆಯಲ್ಲಿ ಪೊಲೀಸ್ ಠಾಣೆಯ ಬಾಗಿಲು ಜಖಂಗೊಂಡಿದೆ.
ಇದರಿಂದ ಕೆಂಡಾಮಂಡಲಗೊಂಡ ಪೊಲೀಸರು ಕೊನೆಗೆ ರೊಚ್ಚಿಗೆದ್ದ ಎರಡು ಗುಂಪುಗಳಿಗೆ ಪೊಲೀಸರು ಲಾಠಿ ರುಚಿ ತೋರಿಸಿ ಚದುರಿಸಿದರು.
ಇವರಿಬ್ಬರು ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಹೂವಿನ ಹಡಗಲಿ ಪೊಲೀಸ್ ಠಾಣೆಗೆ ಬಂದಿದ್ದರು ಪೊಲೀಸರು ತಿಳಿಸಿದ್ದಾರೆ.