ನವದೆಹಲಿ prajakiran.com : ದೇಶದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿದೆ.
ಇಂಥಹ ಪರಿಸ್ಥಿತಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಮನ್ ಕಿ ಬಾತ್ ಬದಲು ಜನ್ ಕಿ ಬಾತ್ ಮಾಡುವುದು ಒಳ್ಳೆಯದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣವಾದ ಟ್ವಿಟ್ಟರ್ನಲ್ಲಿ ಟ್ವಿಟ್ ಮಾಡಿರುವ ಅವರು, ದೇಶದಲ್ಲಿನ ವ್ಯವಸ್ಥೆ ಸೋತಿದೆ. ಮನ್ ಕೀ ಬಾತ್ ಗಿಂತಲೂ ಜನ್ ಕಿ ಬಾತ್ ಈಗ ಮುಖ್ಯವಾಗಿದೆ ಎಂದಿದ್ದಾರೆ.
ಈ ಕಷ್ಟದ ಪರಿಸ್ಥಿತಿಯಲ್ಲಿ ದೇಶಕ್ಕೆ ಜವಾಬ್ದಾರಿಯುತ ನಾಗರಿಕರು ಬೇಕಾಗಿದ್ದಾರೆ.
ಕಾಂಗ್ರೆಸ್ ಸಹೋದ್ಯೋಗಿಗಳು ರಾಜಕೀಯ ಕೆಲಸಗಳನ್ನು ಬಿಟ್ಟು, ಜನರಿಗೆ ಸಹಾಯ ಮಾಡಿ. ಇದು ಕಾಂಗ್ರೆಸ್ ಕುಟುಂಬದ ಕರ್ತವ್ಯ ಎಂದು ಹೇಳಿದ್ದಾರೆ.