ಬೀದರ prajakiran.com : ರಾಜ್ಯದ ಪ್ರತಿಷ್ಠಿತ ಬೆಂಗಳೂರಿನ ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸಿನೆಟ್ ಸದಸ್ಯರಾಗಿ ಬೀದರನ ಶ್ರೀ ಸಿದ್ದರಾಮೇಶ್ವರ ಆಯುರ್ವೇದಿಕ ಮೆಡಿಕಲ್ ಕಾಲೇಜ್ ಹಾಗೂ ಸಂಶೋಧನಾ ಸಂಸ್ಥೆ ಪ್ರಾಚಾರ್ಯರಾದ ಡಾ. ರೂಪೇಶ್ ಎಕಲಾರಕರ್ ಅವರನ್ನು
ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ವಿವಿಯ ಕುಲಸಚಿವರು ತಿಳಿಸಿದ್ದಾರೆ.
ಇವರು ಬೀದರ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಮುರಳಿಧರ್ ಎಕಲಾರಕರ್ ಅವರ ಪುತ್ರರಾಗಿದ್ದಾರೆ.
ಕಳೆದ ಎರಡು ದಶಕಗಳಿಂದ ಬೀದರನಲ್ಲಿ ಶ್ರೀ ಸಿದ್ದರಾಮೇಶ್ವರ ಆಯುರ್ವೇದಿಕ ಮೆಡಿಕಲ್ ಕಾಲೇಜ್ ಹಾಗೂ ಸಂಶೋಧನಾ ಸಂಸ್ಥೆ ಕಾರ್ಯನಿರ್ವಹಿಸುತ್ತಿದ್ದು, ತನ್ನದೆ ಆದ ವೈಶಿಷ್ಟತೆ ಹೊಂದಿದೆ.
ಅದರ ಪ್ರಾಚಾರ್ಯರಾಗಿ ಡಾ. ರೂಪೇಶ್ ಎಕಲಾರಕರ್ ಅವರು ಕೂಡ ಸಾಕಷ್ಟು ಸಮಾಜಮುಖಿ ಕಾರ್ಯಗಳನ್ನು ಕೈಗೊಂಡಿದ್ದಾರೆ.
ಅವರ ಸೇವೆಯನ್ನು ಗುರುತಿಸಿ ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಸಿನೆಟ್ ಸದಸ್ಯರಾಗಿ ನೇಮಿಸಿರುವುದು ಬೀದರ ಹಾಗೂ ವಿಶೇಷವಾಗಿ ಕಲ್ಯಾಣ ಕರ್ನಾಟಕದ ಜನತೆಗೆ ಹೆಮ್ಮೆಯ ಸಂಗತಿಯಾಗಿದೆ.