ರಾಮಲಲ್ಲಾನಿಗೆ ದೀರ್ಘದಂಡ ನಮಸ್ಕಾರ ಹಾಕಿ ಕೃತಾರ್ಥರಾದ ಪ್ರಧಾನಿ
ಅಯೋಧ್ಯೆ prajakiran.com : ಜನ್ಮಭೂಮಿ ಅಯೋಧ್ಯೆಯಲ್ಲಿ ರಾಮಮಂದಿರ ಶಿಲಾನ್ಯಾಸಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ನೆರವೇರಿಸಿದರು.
ಪೂಜೆಯಲ್ಲಿ ಪಾಲ್ಗೊಂಡು ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದ ಬಳಿಕ ಪ್ರಧಾನಿ ಶ್ರೀ @narendramodiಜೀ ಅವರಿಂದ ಅಯೋಧ್ಯೆಯಲ್ಲಿ ವಿರಾಜಮಾನನಾದ ಶ್ರೀರಾಮಲಲ್ಲಾನಿಗೆ ದೀರ್ಘದಂಡ ನಮಸ್ಕಾರ ಹಾಕಿ ಕೃತಾರ್ಥರಾದರು.
#JaiShriRam ಶ್ರದ್ಧಾಭಕ್ತಿಯಿಂದ ಹಲವು ಗಂಟೆಗಳ ಕಾಲ ವಿಶೇಷ ಪೂಜೆ ನೆರವೇರಿಸಲಾಯಿತು.
ಆ ಮೂಲಕ ಶತ ಶತಮಾನಗಳಅಸಂಖ್ಯಾತ ಹಿಂದೂಗಳ ಕನಸನ್ನು ನನಸು ಆಯಿತು.
ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ ಭಾಗವತ್,ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ರಾಜ್ಯಪಾಲರಾದ ಆನಂದಿಬೇಹನ್ ಪಟೇಲ್, ದೇಶದ ನಾನಾ ಭಾಗಗಳ ನೂರಾರು ಸಂತ ಸಮೂಹ ಸೇರಿದಂತೆ ಅನೇಕರು ಸಾಕ್ಷಿಯಾದರು.