ಧಾರವಾಡ Prajakiran.com ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಇಬ್ಬರು ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡದಿದ್ದರೇನಂತೆ ಶ್ರೀ ರಾಮ ಮಂದಿರ ಅಯೋಧ್ಯೆಯಲ್ಲಿ ನಿರ್ಮಾಣ ಆಗೇ ಆಗುತ್ತದೆ ಇದು ಜನರ ಬಯಕೆ ಎಂದು ಧಾರವಾಡದಲ್ಲಿ ಸಚಿವ ಜಗದೀಶ ಶೆಟ್ಟರ್ ಹೇಳಿದರು.
ಮಾದ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಚಿವ ಜಗದೀಶ್ ಶೆಟ್ಟರ್, ಮಾಜಿ ಸಿಎಂ ಸಿದ್ದರಾಮಯ್ಯ ಅವರು ರಾಮಮಂದಿರಕ್ಕೆ ದೇಣಿಗೆ ನೀಡೋದಿಲ್ಲ ಎಂಬ ಹೇಳಿಕೆ ನೀಡಬಾರದು.
ಅವರ ಹೇಳಿಕೆ ಸಿದ್ದರಾಮಯ್ಯ ಹೆಸರಿಗೆ ಕಪ್ಪು ಚುಕ್ಕೆ ಎಂದು ಕುಟುಕಿದರು.
ಪಿಎಫ್ಐ ಹಾಗೂ ಸಿದ್ದರಾಮಯ್ಯ ಒಂದೇ ಟೀಮ್ ನವರು. ಅವರು ಇದನ್ನು ವೋಟ್ ಬ್ಯಾಂಕ್ ರಾಜಕಾರಣ ಎಂದು ಕೊಂಡಿದ್ದಾರೆ.
ಪಿಎಫ್ಐನವರಿಗೆ ಆರ್ ಎಸ್ಎಸ್ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ. ಆರ್ ಎಸ್ಎಸ್ ಒಂದು ದೇಶಭಕ್ತ ಸಂಘಟನೆ ಎಂದರು.
ಐಎಂಎ ಹಗರಣದಲ್ಲಿ ಯಾರೇ ಇದ್ದರೂ ಹೊರಗೆ ಬರಲಿ. ಈ ಬಗ್ಗೆ ತನಿಖೆ ನಡೆಯುತ್ತಿದೆ. ಅದರಲ್ಲಿ ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಇದ್ದರೂ ಗೊತ್ತಾಗಲಿ ಎಂದು ಶೆಟ್ಟರ್ ಹೇಳಿದರು.