ಬೆಳಗಾವಿ prajakiran.com : ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ವಿರುದ್ದ ಗುರುವಾರ ಮತ್ತೆ ಜಲ ಸಂಪನ್ಮೂಲ ಸಚಿವ ಹಾಗೂ ಬೆಳಗಾವಿ ಜಿಲ್ಲಾಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹರಿಹಾಯ್ದಿದ್ದಾರೆ.
ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಗ್ಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರಗೆ ಸಚಿವ ರಮೇಶ ಜಾರಕಿಹೊಳಿ ಅವರು ಬಹಿರಂಗವಾಗಿಯೇ ಸವಾಲು ಹಾಕಿದ್ದಾರೆ. ಅಲ್ಲದೆ, ಲಕ್ಷ್ಮೀ ಹೆಬ್ಬಾಳಕರಗೆ ಮತ್ತೆ ಮಾತಿನ ಚಾಟಿಯೇಟು ಬಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಗೋಕಾಕ ಪಟ್ಟಣದಲ್ಲಿ ಸಚಿವ ರಮೇಶ ಜಾರಕಿಹೊಳಿ ಅವರು ಹರಿಹಾಯ್ದಿದ್ದು, ಮೊನ್ನೆ ನಡೆದ ಸಭೆಯಲ್ಲಿ ಲಕ್ಷ್ಮಿ ಹೆಬ್ಬಾಳಕರ ತಮ್ಮ ಪಕ್ಷದ ಪರವಾಗಿ ಮಾತನಾಡಿದ್ದಾರೆ. ಅದರಲ್ಲಿ ತಪ್ಪಿಲ್ಲ. ಆದರೆ ಇತಿ ಮಿತಿಯಲ್ಲಿ ಮಾತನಾಡ ಬೇಕಿತ್ತು ಎಂದು ಗುಡುಗಿದ್ದಾರೆ.
ನಾವು ಶಾಸಕರಾದರೆ ಮಾತ್ರಕ್ಕೆ ಏನ್ ಮೇಲಿಂದ ಬಿದ್ದವರಲ್ಲ, ನಾವು ಜನರ ಪ್ರತಿನಿಧಿಗಳು ಎಂಬುದನ್ನು ಮರೆಯಬಾರದು ಎಂದರು.
ಲಕ್ಷ್ಮೀ ಹೆಬ್ಬಾಳಕರಗೆ ಹಾಕಿದ ಸವಾಲಿನ ಬಗ್ಗೆಯೂ ಪ್ರತಿಕ್ರಿಯೆ ನೀಡಿದ ಸಚಿವ ರಮೇಶ ಜಾರಕಿಹೊಳಿ ಅವರು, ಬೆಳಗಾವಿ ಗ್ರಾಮೀಣ ಕ್ಷೇತ್ರವನ್ನು ಬಿಡುವುದಿಲ್ಲ ನೋಡ್ತಾ ಇರ್ರಿ ನೀವು ಎಂದು ಹೇಳಿದರು.