ಬೆಳಗಾವಿ prajakiran.com : ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಕ್ಷೇತ್ರದಲ್ಲಿ ಗ್ರಾಮೀಣ ಜಿಲ್ಲಾ ಬಿಜೆಪಿ ಕಚೇರಿ ಉದ್ಘಾಟಿಸಿದ ಮಾಡಿದ ಸಚಿವ ರಮೇಶ ಜಾರಕಿಹೊಳಿ ಮತ್ತೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅವರಿಗೆ ಟಾಂಗ್ ಕೊಟ್ಟಿದ್ದಾರೆ.
ಬಿಜೆಪಿ ಕಚೇರಿ ಉದ್ಘಾಟಿಸಿ ಮಾತನಾಡಿದ ಸಚಿವ ರಮೇಶ್ ಜಾರಕಿಹೊಳಿ ಭಾಷಣದ ಉದ್ದಕ್ಕೂ ಲಕ್ಷ್ಮಿ ಹೆಬ್ಬಾಳಕರ ವಿರುದ್ದ ಹರಿಹಾಯದ್ರು.
ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕರಿಗೆ ಹಣದ ಗಮಂಡ್ ಬಹಳ ಇದೆ. ಆ ಹಣದ ಗಮಂಡ್ನ್ನು ನಾವು ತೋರಿಸಲು ನಾನು ರೆಡಿ ಇದ್ದೇನೆ ಎಂದು ಗುಡುಗಿದರು.
ಕಳೆದ ಚುನಾವಣೆಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಕೊಟ್ಟ ಕುಕ್ಕರ್ ಸ್ಟಾರ್ಟ್ ಇದೆಯೋ ಬಂದ್ ಇದೆಯೋ ನನಗೆ ಗೊತ್ತಿಲ್ಲ. ಆದರೆ ಆ ಕುಕ್ಕರ್ಗಳನ್ನು ನಾನೇ ಕೊಟ್ಟಿದ್ದು ಎಂದು ರಮೇಶ್ ಜಾರಕಿಹೊಳಿ ಬಹಿರಂಗವಾಗಿಯೇ ಒಪ್ಪಿಕ್ಕೊಂಡಿದ್ದಾರೆ.
ಕ್ಷೇತ್ರದ ಜನರಿಗೆ ಕುಕ್ಕರ್ ಹಂಚಿದ್ದು ನನ್ನ ದುಡ್ಡು ಅದು, ಅವಳ ದುಡ್ಡು ಅಲ್ಲ. ಆ ಕುಕ್ಕರ್ ಹಂಚಿದ್ದ ದುಡ್ಡು ರಮೇಶ್ ಜಾರಕಿಹೊಳಿಯ ದುಡ್ಡು ಎಂದು ಕುಟುಕಿದ್ದಾರೆ.
ಬೆಳಗಾವಿ ಗ್ರಾಮೀಣ ಬಿಜೆಪಿ ಕಾರ್ಯಾಲಯಕ್ಕೆ 5 ಲಕ್ಷ ರೂಪಾಯಿ ಸಹಾಯ ಮಾಡಿದವನು ನಾನು. ದುಡ್ಡಿನ ಆಮಿಷಕ್ಕೆ ನೀವ್ಯಾರು ಬಲಿಯಾಗಬೇಡಿ. ನಾನು ನಿಮ್ಮ ಜೊತೆಗಿರುತ್ತೇನೆ ಎಂದರು.
ಅಲ್ಲದೆ, 2023ರ ಚುನಾವಣೆಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿ ಬಾವುಟ ಹಾರಿಸಬೇಕು. ಅಲ್ಲದೆ, ಮುಂಬರುವ ಡಿಸಿಸಿ ಬ್ಯಾಂಕ್, ಜಿ.ಪಂ., ಗ್ರಾ.ಪಂ. ಎಲೆಕ್ಷನ್ಗೆ ಗಟ್ಟಿಯಾಗಿ ನಿಲ್ಲಬೇಕಿದೆ ಎಂದು ಹೇಳಿದರು.
ಈಗಾಗಲೇ ಡಿಸಿಸಿ ಬ್ಯಾಂಕ್ ಚುನಾವಣೆಗೆ ಕಾರ್ಯಕರ್ತರು ತಮ್ಮ ಕ್ಯಾಂಡಿಡೇಟ್ಗಳಿಗೆ ದುಡ್ಡು ಹಂಚುತ್ತಿದ್ದಾರೆಂಬ ಮಾಹಿತಿ ನನಗೆ ಗೊತ್ತಾಗಿದೆ. ಅವರು ಎಷ್ಟು ಕೊಡ್ತಾರೋ ಅದಕ್ಕೆ ಡಬಲ್ ದುಡ್ಡು ಕೊಡಲು ನಾವು ಸಿದ್ಧರಿದ್ದೇವೆ ಎಂದು ಬಹಿರಂಗವಾಗಿ ಹೇಳಿದರು.
ನಾನು ಸೊಕ್ಕಿನಿಂದ ಈ ಮಾತನ್ನು ಹೇಳುತ್ತಿಲ್ಲ. ನಮ್ಮದು ಬೆವರು ಸುರಿಸಿ ದುಡಿದ ದುಡ್ಡು, ಅವರ ರೀತಿ ಹರಾಮಿ ದುಡ್ಡಿಲ್ಲ. ಸಾಲ ಮಾಡಿ ದುಡ್ಡು ಕೊಡ್ತೀವಿ ನಾವು ಎಂದು ಹೇಳಿದರು.
ಉತ್ತರ ಕರ್ನಾಟಕದಲ್ಲಿ ಬಿಜೆಪಿಯನ್ನು ಬಲಪಡಿಸುತ್ತೇವೆ. ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಮತ್ತೊಂದು ದೊಡ್ಡ ಸಭೆ ಮಾಡೋಣ. ಇನ್ನೂ ಬಹಳ ಮಾತನಾಡೋದಿದೆ ಎಂದು ಕಿಡಿಕಾರಿದರು.
ಭಾಷಣದ ಉದ್ದಕ್ಕೂ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅವರಿಗೆ ಟಾಂಗ್ ಕೊಟ್ಟ ರಮೇಶ ಜಾರಕಿಹೊಳಿ ಮಾತಿನ ವಾಕ್ಸಮರ ಒಣ ತಿಕ್ಕಾಟ ಎಲ್ಲಿಗೆ ಹೋಗಿ ನಿಲ್ಲುತ್ತೋ ಎಂಬುದು ಕಾದು ನೋಡಬೇಕಿದೆ.