ಬೆಂಗಳೂರು prajakiran.com : ಬಾಂಗ್ಲಾದೇಶದ ಯುವತಿ ಮೇಲೆ ಅತ್ಯಾಚಾರ ಎಸಗಿದಲ್ಲದೆ, ಆಕೆಯ ಮರ್ಮಾಂಗಕ್ಕೆ ಮದ್ಯದ ಬಾಟಲಿ ನುಗ್ಗಿಸಿದ್ದ, ನಾಲ್ವರು ಕಿರಾತಕರನ್ನು ಬಂಧಿಸಲಾಗಿದೆ.
ಶುಕ್ರವಾರ ಕೃತ್ಯ ನಡೆಸಿದ ಸ್ಥಳ ಪರಿಶೀಲನೆಗೆ ಆರೋಪಿಗಳನ್ನು ಕರೆದುಕೊಂಡು ಹೋದಾಗ, ಆರೋಪಿಗಳು ಪೊಲೀಸರ ಮೇಲೆಯೇ ಹಲ್ಲೆ ಮಾಡಲು ಯತ್ನಿಸಿ, ಅಲ್ಲಿಂದ ಪರಾರಿಯಾಗಲು ಯತ್ನಸಿದ್ದರು.
ಆಗ ತಕ್ಷಣ ಆರೋಪಿಗಳ ಮೇಲೆ ಪೊಲೀಸರು ಅವರ ಕಾಲಿಗೆ ಫೈರಿಂಗ್ ಮಾಡಿದ್ದಾರೆ.
ಸಾಗರ್, ಮೊಹಮ್ಮದ್ ಬಾಬಾ ಶೇಕ್, ರಿದಾಯ್ ಬಾಬು ಹಾಗೂ ಹಕೀಲ್ ಬಂಧಿತ ಆರೋಪಿಗಳು.
ಈ ನಾಲ್ವರು ಬಾಂಗ್ಲಾ ಮೂಲದವರಾಗಿದ್ದು, ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದರು.
ಸಂತ್ರಸ್ಥೆ ಯುವತಿ ಸೇರಿದಂತೆ ಆರೋಪಿಗಳು ರಾಮಮೂರ್ತಿ ನಗರದ ಎನ್ಆರ್ಐ ಲೇಔಟ್ನಲ್ಲಿ ವಾಸವಾಗಿದ್ದರು.
ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರಗೈದಿದ್ದಲ್ಲದೆ ಈ ಹೇಯ ಕೃತ್ಯವನ್ನು ವಿಡಿಯೋ ಮಾಡಲಾಗಿತ್ತು.
ಯುವತಿಯ ಮೇಲಿನ ದ್ವೇಷಕ್ಕಾಗಿ ಅತ್ಯಾಚಾರ ನಡೆಸಿದ್ದಾರೆ ಎನ್ನಲಾಗಿದೆ.
10 ದಿನಗಳ ಹಿಂದೆ ಅತ್ಯಾಚಾರದ ಈ ವೀಡಿಯೋ ವೈರಲ್ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.