ರಾಜ್ಯ

ಸರ್ಕಾರಿ ಕಚೇರಿ ಕೇವಲ 24 ಗಂಟೆ, ಸಾರ್ವಜನಿಕರ ಅಂಗಡಿ ಗಳಾದರೆ 48 ಗಂಟೆ ಸೀಲ್ ಡೌನ್ …!?

ಧಾರವಾಡ prajakiran.com : ಧಾರವಾಡ ಜಿಲ್ಲಾಡಳಿತ ಸಾರ್ವಜನಿಕ ಹಿತದೃಷ್ಟಿಯಿಂದ ರ‍್ಯಾಪಿಡ್ ಆ್ಯಂಟಿಜನ್ ಟೆಸ್ಟ್ ಮಾಡುತ್ತಿರುವುದು ಒಳ್ಳೆಯ ಕಾರ್ಯಕ್ರಮ.

ಕೆಮ್ಮು, ನೆಗಡಿ, ಜ್ವರ, ಶೀತದ ಲಕ್ಷಣಗಳು ಇದ್ದರೆ ಕೋವಿಡ್ ತಪಾಸಣೆ ಮಾಡಿಸಿಕೊಳ್ಳಿ ಎಂದು ಜಾಹಿರಾತು ತಪಾಸಣೆಯ ವಾಹನದ ಮೇಲೆ ಇದೆ.

ಆದರೆ ಪೊಲೀಸರು, ಮಹಾನಗರ ಪಾಲಿಕೆ ಅಧಿಕಾರಿಗಳು, ಎಲ್ಲಾ ಅಂಗಡಿಕಾರರಿಗೆ ಹಾಗೂ ಸಾರ್ವಜನಿಕ ರಿಗೆ ಒತ್ತಾಯ ಪೂರ್ವಕವಾಗಿ  ಪರೀಕ್ಷೆ ಮಾಡಿಸಿಕೊಳ್ಳಿ ಎನ್ನುವದು ಒಂದು ರೀತಿಯ ಧಮ್ಕಿ ಹಾಕಿದಂತಿದೆ ಎಂದು ವ್ಯಾಪಾರಸ್ಥರು ಬಹಿರಂಗವಾಗಿ ಆರೋಪಿಸುತ್ತಿದ್ದಾರೆ.

ರ‍್ಯಾಪಿಡ್ ಆ್ಯಂಟಿಜನ್ ಟೆಸ್ಟ್  ವಾಹನ ನೋಡಿದ ಕೂಡಲೇ ಹುಬ್ಬಳ್ಳಿ-ಧಾರವಾಡ ಅವಳಿ ನಗರದ  ಜನ  ಎದ್ನೋ ಬಿದ್ನೋ ಅಂತ ಓಡಿ ಹೋಗುವಂತಾಗಿದೆ ಎಂದು ಉದ್ಯಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದು ಜನ ಜಾಗೃತಿ ಕಾರ್ಯಕ್ರಮ ವಾಗಬೇಕೆ,ವಿನಃ ಜನರನ್ನು ಹೆದರಿಸುವ ಕಾರ್ಯಕ್ರಮ ವಾಗಬಾರದು ಎಂದು ಅಭಿಪ್ರಾಯಪಟ್ಟಿದ್ದಾರೆ.

ಅಲ್ಲದೆ, ರ‍್ಯಾಪಿಡ್ ಆ್ಯಂಟಿಜನ್ ಟೆಸ್ಟ್ ನಲ್ಲಿ ತತ್‌ಕ್ಷಣ ಪರಿಣಾಮ+ve  ಪಾಸಿಟಿವ್ ಬಂದರೆ …ಅದೇ  ಸಿವಿಲ್ ಆಸ್ಪತ್ರೆಯಲ್ಲಿ ಮರು ಪರೀಕ್ಷೆ ಮಾಡಿಸಿದವರಿಗೆ -ve  ನೆಗೆಟಿವ್ ಬಂದಿದೆ ಇದರ ಹಿಂದೆ ಎನೋ ನಡೆಯುತ್ತಿದೆ ಎಂದು ಸಾರ್ವಜನಿಕರು ಮಾತನಾಡಿಕೊಳ್ಳುವಂತಾಗಿದೆ ಎಂದು ತಮ್ಮ ಬೇಸರ ಹೊರಹಾಕಿದ್ದಾರೆ..

ಇದಲ್ಲದೆ, ಸರ್ಕಾರಿ ಕಚೇರಿಯನ್ನು ಕೇವಲ 24 ಗಂಟೆಗಳಲ್ಲಿ ಸ್ಯಾನಿಟೈಸ್ ಮಾಡಿ ಪುನರಾರಂಭಿಸಲಾಗುತ್ತದೆ. ಆದರೆ, ಸಾರ್ವಜನಿಕರ ಅಂಗಡಿ ,ಕಚೇರಿಗಳಾದರೆ 48 ಗಂಟೆ ಸೀಲ್ ಡೌನ್ ಇದು ಯಾವ ನ್ಯಾಯ? ಎಂದು ಅವರು ಪ್ರಶ್ನೆ ಮಾಡಿದ್ದಾರೆ.

ಒಟ್ಟಿನಲ್ಲಿ ಹುಬ್ಬಳ್ಳಿ ಧಾರವಾಡ ಜನತೆಗೆ ಜಿಲ್ಲಾಡಳಿತ ತುರ್ತು ಪರಿಸ್ಥಿತಿಯನ್ನು ಹೇರಿದಂತಿದೆ ಕಾಣಿಸುತ್ತಿದೆ ಅಂತಾ ಜನರು ಮಾತನಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಆದರೆ, ಆಗೊದೆಲ್ಲಾ ಒಳ್ಳೆಯದಕ್ಕೆ ಎಂದು ನಮ್ಮಷ್ಟಕ್ಕೆ ನಾವೇ ಸಮಾಧಾನ ಮಾಡಿಕೊಳ್ಳದೊಂದೆ ದಾರಿ ಉಳಿದಿದೆ. ಅದು ಬಿಟ್ಟು ಬೇರೆ ಕಾಣುತ್ತಿಲ್ಲ ಎಂದು ತಿಳಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *