ಧಾರವಾಡ prajakiran.com : ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿ ಸಹಿತ ೫.೨೫ ಲಕ್ಷ ರೂಪಾಯಿ ಮೌಲ್ಯದ ಅಕ್ಕಿಯನ್ನು ಧಾರವಾಡದ ಉಪನಗರ ಠಾಣೆಯ ಪೊಲೀಸರು ನಿನ್ನೆ ರಾತ್ರಿ ವಶಪಡಿಸಿಕೊಂಡಿದ್ದಾರೆ.
ಇಲ್ಲಿನ ಪೆಂಡಾರಗಲ್ಲಿಯ ಶಕೀಲ ಶೇಖ ಮತ್ತು ರಜಾಕ್ ಶೇಖ ಎಂಬುವರಿಗೆ ಅಕ್ಕಿ ಸೇರಿದ್ದು ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿತರು ಪಡಿತರ ಅಕ್ಕಿಯನ್ನು ಖರೀದಿಸಿ ಅಧಿಕ ಲಾಭಕ್ಕೆ ಸಾಗಿಸಲು ಯತ್ನಿಸುತ್ತಿದ್ದ ಸಮಯದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳ ದೂರಿನ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.
ಲಾರಿಯಲ್ಲಿ ಸಾಗಿಸುತ್ತಿದ್ದ ೫.೨೫ ಲಕ್ಷ ರೂಪಾಯಿ ಮೌಲ್ಯದ ೨೦೫ ಕ್ಷಿಂಟಲ್ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ.
ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ಕೃಷ್ಣಕಾಂತ, ಎಸಿಪಿ ಅನುಷಾ ಜಿ, ಸಿಪಿಐ ಪ್ರಮೋದ ಯಲಿಗಾರ, ಪಿಎಸ್ಐ ಶ್ರೀಮಂತ ಹುಣಸಿಕಟ್ಟಿ, ಎಎಸ್ಐಗಳಾದ ಆರ್.ಎಚ್.ನದಾಫ್, ಎಂ.ಆರ್.ಮಲ್ಲಿಗವಾಡ, ಸಿಬ್ಬಂದಿಗಳಾದ ಗುರು ಒಡೆಯರ, ಚಂದ್ರು ನಡುವಿನಮನಿ. ಸಿ.ಡಿ.ಬಳ್ಳಾರಿ ಮತ್ತಿತರರು ಅಕ್ಕಿಯನ್ನು ವಶಕ್ಕೆ ಪಡೆದಿದ್ದಾರೆ.
ಈ ಕುರಿತು ಧಾರವಾಡದ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.