ನವದೆಹಲಿ prajakiran. com : ದೇಶದಲ್ಲಿ ಮಹಾಮಾರಿ ಕೊರೋನಾ ದಿನದಿನಕ್ಕೆ ತನ್ನ ರೂಪ ಬದಲಾಯಿಸುತ್ತ ಜನರ ಪ್ರಾಣ ತೆಗೆಯುತ್ತಲೇ ಇದೆ.
ಈ ಹಿನ್ನೆಲೆ ಕೋವಿಡ್ ವಿರುದ್ಧ ಹೋರಾಡಲು ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಮೂಲ ಸಂಸ್ಥೆ ‘ಡಿಯಾಜಿಯೋ’ 45 ಕೋಟಿ ರೂ. ನೆರವು ನೀಡುವುದಾಗಿ ಸಿಇಒ ಆನಂದ್ ಕೃಪಾಲು ಘೋಷಿಸಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮವಾದ ಟ್ವಿಟರ್ನಲ್ಲಿ ಟ್ವೀಟ್ ಮಾಡಿರುವ ಅವರು, ಈ ಕಷ್ಟದ ಸಮಯದಲ್ಲಿ ದೇಶದ ಪರವಾಗಿ ನಿಂತು ಕೊರೋನಾ ವಿರುದ್ಧ ಹೋರಾಡಲು ಸಿದ್ಧರಾಗಿದ್ದೇವೆ.
ಸರ್ಕಾರ ಕೈಗೊಂಡ ನಿರ್ಧಾರಗಳಿಗೆ ಬದ್ಧರಾಗಿದ್ದು, ವೈದ್ಯಕೀಯ ಸವಲತ್ತುಗಳನ್ನು ಒದಗಿಸಲು ಈ ದೇಣಿಗೆ ನೀಡುತ್ತಿದ್ದೇವೆ ಎಂದು ಬರೆದುಕೊಂಡಿದ್ದಾರೆ.