ಸಚಿವ ಡಿ.ವಿ. ಸದಾನಂದಗೌಡ
ಬೆಂಗಳೂರು prajakiran.com : ಕೇಂದ್ರ ಸರ್ಕಾರ ವಿವಿಧ ರಾಜ್ಯಗಳಿಗೆ ಮೇ 17 ರಿಂದ ಮೇ 23ರ ವರೆಗಿನ ಬಳಕೆಗಾಗಿ ರೆಮ್ಡೆಸಿವಿರ್ ಚುಚ್ಚುಮದ್ದಿನ 23 ಲಕ್ಷ ವಯಲ್ಸ್ ಹಂಚಿಕೆ ಮಾಡಿದೆ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣವಾದ ಟ್ವಿಟರ್ನಲ್ಲಿ ಟ್ವೀಟ್ ಮಾಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ನಮ್ಮ ಕೇಂದ್ರ ಸರ್ಕಾರವು ವಿವಿಧ ರಾಜ್ಯಗಳಿಗೆ ಮೇ 17 ರಿಂದ ಮೇ 23ರ ವರೆಗಿನ ಬಳಕೆಗಾಗಿ 23 ಲಕ್ಷ ವಯಲ್ಸ್ ರೆಮ್ಡೆಸಿವಿರ್ ಚುಚ್ಚುಮದ್ದು ಹಂಚಿಕೆ ಮಾಡಿದೆ.
ರಾಜ್ಯಕ್ಕೆ 4.25 ಲಕ್ಷ ವಯಲ್ಸ್ ಒದಗಿಸಲಾಗಿದೆ. ಏ. 21 ರಿಂದ ಇದುವರೆಗೆ 76 ಲಕ್ಷ ವಯಲ್ಸ್ ರೆಮ್ಡೆಸಿವಿರ್ ಹಂಚಲಾಗಿದ್ದು ರಾಜ್ಯದ ಪಾಲು 10 ಲಕ್ಷ ಎಂದು ತಿಳಿಸಿದ್ದಾರೆ.