ರಾಜ್ಯ

ಬಿಜೆಪಿ ಸರ್ಕಾರ ಸೃಷ್ಟಿಸಿದ ಮೀಸಲಾತಿ ಗೊಂದಲ ನಿವಾರಣೆ : ಸಿದ್ದರಾಮಯ್ಯ

ಬಿಜೆಪಿ ಸರ್ಕಾರ ಸೃಷ್ಟಿಸಿದ ಮೀಸಲಾತಿ
ಗೊಂದಲ ನಿವಾರಣೆ : ಸಿದ್ದರಾಮಯ್ಯ

ಬೆಂಗಳೂರು ಪ್ರಜಾಕಿರಣ.ಕಾಮ್
ನಮ್ಮ ಸರ್ಕಾರದ ಅವಧಿಯಲ್ಲಿ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮೂಲಕ ನಡೆಸಿದ್ದ ಜಾತಿವಾರು ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ವರದಿಯನ್ನು ಸ್ವೀಕರಿಸಿ, ಅದರ ದತ್ತಾಂಶದ ಆಧಾರದಲ್ಲಿ ವಿವಿಧ ಸಮುದಾಯಗಳಿಗೆ ಅನುಕೂಲ ಕಲ್ಪಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಅವರು ಬುಧವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

ಬಿಜೆಪಿ ಸರ್ಕಾರವು ಮೀಸಲಾತಿಯಲ್ಲಿ ಸೃಷ್ಟಿಸಿದ ಗೊಂದಲ ನಿವಾರಣೆ ಮಾಡುತ್ತೇವೆ. ಇಲ್ಲವಾದರೆ ಯಾರಿಗೂ ಸಾಮಾಜಿಕ ನ್ಯಾಯ ಒದಗಿಸಲು ಸಾಧ್ಯವಾಗಲ್ಲ ಎಂದು ಹೇಳಿದರು.

ಜಾತಿವಾರು ಸಮೀಕ್ಷೆಯಿಂದ ಜನರಿಗೆ ಒದಗಿಸಬೇಕಾದ ಸೌಲಭ್ಯಗಳು, ಆದ್ಯತಾ ಕ್ರಮಗಳು ಮೊದಲಾದ ಅಂಶಗಳ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲು ಅಗತ್ಯವಿರುವ ದತ್ತಾಂಶ ಲಭ್ಯವಾಗುತ್ತದೆ ಎಂದರು.

ಮೀಸಲಾತಿ ಮತ್ತಿತರ ಸೌಲಭ್ಯಗಳನ್ನು ಒದಗಿಸಲು ವೈಜ್ಞಾನಿಕ ಹಾಗೂ ನಿಖರ ಮಾಹಿತಿ ಅತಿ ಅಗತ್ಯ.

ಈ ಉದ್ದೇಶದಿಂದ ಜಾತಿವಾರು ಸಮೀಕ್ಷೆಯನ್ನು ನಡೆಸಲಾಗಿತ್ತು ಎಂದರು.

ಇದೀಗ ವರದಿಯನ್ನು ಸ್ವೀಕರಿಸಿ, ಅದರಲ್ಲಿನ ದತ್ತಾಂಶಗಳ ಆಧಾರದಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ವಿವರಿಸಿದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *