ಬೆಂಗಳೂರು ಪ್ರಜಾಕಿರಣ.ಕಾಮ್ : ರಾಜ್ಯದಲ್ಲಿ ಚುನಾವಣೆಯಲ್ಲಿ ಸಮೀಪಿಸುತ್ತಿದ್ದಂತೆ ನಿನ್ನೆ ನಡೆದ ಕೊನೆಯ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ರಾಜ್ಯದ ಪ್ರಬಲ ಲಿಂಗಾಯತ ಹಾಗೂ ಒಕ್ಕಲಿಗ ಸಮುದಾಯಕ್ಕೆ ಮಹತ್ವದ
ಮೀಸಲಾತಿ ಪ್ರಕಟಿಸಿದ್ದಾರೆ.
ಅವರು ವಿಧಾನಸೌಧದಲ್ಲಿ ನಡೆದ ಮಹತ್ವದ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
2C ಪ್ರವರ್ಗದಲ್ಲಿ ಒಕ್ಕಲಿಗರಿಗೆ ಶೇ.4ರಷ್ಟು ಇದ್ದ ಮೀಸಲಾತಿಯನ್ನು ಶೇ.6ಕ್ಕೆ ಹೆಚ್ಚಿಸಲು ನಿರ್ಧಾರ ಕೈಗೊಳ್ಳಲಾಗಿದೆ.
ಲಿಂಗಾಯತ ಸಮುದಾಯಕ್ಕೆ 3 ಬಿ ಯಿಂದ 2 dಗೆ ತರಲಾಗಿದ್ದು, ಈ ಹಿಂದೆ ಇದ್ದ ಶೇ.5 ಮೀಸಲಾತಿ ಯನ್ಬು ಶೇ.7ಕ್ಕೆ ಹೆಚ್ಚುವರಿ ಮೀಸಲಾತಿ ಕಲ್ಪಿಸುವ ನಿರ್ಣಯ ಕೈಗೊಂಡಿದೆ ಎಂದರು.
ಪರಿಶಿಷ್ಟ ಜಾತಿಯ ಆದಿ ಜಾಂಬವ ವರ್ಗಕ್ಕೆ ಶೇ.6%, ಆದಿ ಕರ್ನಾಟಕಕ್ಕೆ 5.5% & ಬಂಜಾರ, ಬೋವಿ, ಕೊರಚರಿಗೆ 4.5%, ಇತರರಿಗೆ 1%, ಮೀಸಲಾತಿ ನೀಡಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.
ಇನ್ನು, ಮುಸ್ಲಿಮರಿಗೆ ಇದ್ದ ಪ್ರತ್ಯೇಕ 2B ಮೀಸಲಾತಿ ರದ್ದುಗೊಳಿಸಿ, ಆರ್ಥಿಕ ಹಿಂದುಳಿದ ವರ್ಗಗಳ ಮೀಸಲಾತಿಯಡಿ(EWS) ಮುಸ್ಲಿಮರಿಗೆ ಮೀಸಲಾತಿ ನೀಡುವ ನಿರ್ಣಯವನ್ನು ಕೈಗೊಳ್ಳಲಾಗಿದೆ ಎಂದರು.
ಕಾಡು ಕುರುಬ, ಗೊಂಡ ಕುರುಬರನ್ನ ಎಸ್ಟಿಗೆ ಸೇರಿಸಿ ಒಳಮೀಸಲಾತಿ ಕಲ್ಪಿಸುವ ಬಗ್ಗೆ ಕೇಂದ್ರಕ್ಕೆ ಶಿಫಾರಸು ಸಲ್ಲಿಸಲಾಗಿದ್ದು, ಪರಿಶಿಷ್ಟ ಜಾತಿಯ ಒಳಮೀಸಲಾತಿ ಜಾರಿ ಸಂಬಂಧ ಸದಾಶಿವ ಆಯೋಗದ ವರದಿ ಜಾರಿ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ವಿವರಿಸಿದರು.