ರಾಯಚೂರು prajakiran.com : ವೈದ್ಯರ ನಿರ್ಲಕ್ಷ್ಯದಿಂದಾಗಿ ಕರೋನಾ ಸೋಂಕಿತ ಮಹಿಳೆಯ ಗರ್ಭಪಾತ ನಡೆದಿರುವ ದುರಂತ ರಾಯಚೂರು ಜಿಲ್ಲೆಯ ಕೋವಿಡ್ ಆಸ್ಪತ್ರೆಯಲ್ಲಿ ನಡೆದಿದೆ.
ಮೂರು ತಿಂಗಳ ಗರ್ಭೀಣಿ ಮಹಿಳೆ ಜಿಲ್ಲಾಸ್ಪತ್ರೆಯ ಐಸೋಲೇಶನ್ ವಾರ್ಡ್ ನಲ್ಲಿ ದಾಖಲಾಗಿದ್ದರು. ಅವರು ನಿನ್ನೇ ಮಧ್ಯಾಹ್ನ ರಕ್ತಸ್ರಾವ ದಿಂದ ಬಳಲುತ್ತಿದ್ದರು.
ಈ ಬಗ್ಗೆ ತಕ್ಷಣ ವೈದ್ಯರಿಗೆ ಮಾಹಿತಿ ನೀಡಿದರೂ ಅವರು ನಿರ್ಲಕ್ಷ್ಯ ತೋರಿದ್ದಾರೆ. ಇದರಿಂದಾಗಿಯೇ ಅವರಿಗೆ ಗರ್ಭಪಾತವಾಗಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.
ಇದರಿಂದಾಗಿ ಆಕ್ರೋಶಗೊಂಡ ಸೋಂಕಿತರು ಊಟ ಬಿಟ್ಟು ಕೆಲ ಕಾಲ ಆಸ್ಪತ್ರೆಯ ಆವರಣದಲ್ಲಿ ಪ್ರತಿಭಟನೆ ನಡೆಸಿ ತಮ್ಮಅಸಮಾಧಾನ ವ್ಯಕ್ತಪಡಿಸಿದರು.
ವೈದ್ಯರು ತಡವಾಗಿ ಆಗಮಿಸಿದ ಪರಿಣಾಮಮೇ ಗರ್ಭಪಾತ ಆಗಿದೆ ಎಂಬ ದೂರಿನ ಹಿನ್ನಲೆಯಲ್ಲಿ ಕರೋನಾ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕ್ರಮ ಜರುಗಿಸಲಾಗುವುದು ಎಂದು ರಾಯಚೂರು ಜಿಲ್ಲಾಆರೋಗ್ಯ ಅಧಿಕಾರಿ ಡಾ. ರಾಮಕೃಷ್ಣ ಸ್ಪಷ್ಟಪಡಿಸಿದ್ದಾರೆ.
ಈಬಗ್ಗೆ ಪ್ರತಿಕ್ರಿಯೆ ನೀಡಿದ ರಾಯಚೂರು ಶಾಸಕ ಶಿವರಾಜ ಪಾಟೀಲ, ಡೀನ್ ಹಾಗೂ ಡಿಸಿ ಜೊತೆಗೆ ಮಾತನಾಡಿದ್ದೇನೆ.
ಎಲ್ಲಾ ವೈದ್ಯರು ಕರ್ತವ್ಯ ನಿರ್ವಹಿಸುತ್ತಿಲ್ಲ. ಹೀಗಾಗಿ ಎಲ್ಲರಿಗೂ ಕರ್ತವ್ಯಕ್ಕೆ ನಿಯೋಜಿಸುವಂತೆ ಮನವಿ ಮಾಡಿದ್ದೇನೆ ಎಂದರು.