ಧಾರವಾಡದಲ್ಲಿ ಒಂದು ವಾರದಿಂದ ಕುಡಿಯುವ ನೀರು ಬರುತ್ತಿಲ್ಲ…..!?
ಶಿವಲೀಲಾ ಕುಲಕರ್ಣಿ ನೇತೃತ್ವದಲ್ಲಿ ರಸ್ತೆ ತಡೆ
ಧಾರವಾಡ ಪ್ರಜಾಕಿರಣ.ಕಾಮ್ : ಧಾರವಾಡದ ಮುರುಘಾಮಠ ಭಾಗದಲ್ಲಿ ಒಂದು ವಾರದಿಂದ ಕುಡಿಯುವ ನೀರಿನ ಸರಬರಾಜು ಆಗುತ್ತಿಲ್ಲ ಎಂದು ಆರೋಪಿಸಿ
ಮುರಘಾಮಠದ ಮುಂದೆ ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಪತ್ನಿ ಶಿವಲೀಲಾ ಕುಲಕರ್ಣಿ ನೇತೃತ್ವದಲ್ಲಿ ರಸ್ತೆ ತಡೆ ನಡೆಸಿದರು.
ಪೊಲೀಸರು ರಸ್ತೆ ತಡೆ ಮುಂದುವರೆಸಿದರೆ ಕಾನೂನು ಪ್ರಕಾರ ಬಂಧಿಸುವುದಾಗಿ ಹೇಳಿದರು. ಇದರಿಂದಾಗಿ ಮತ್ತಷ್ಟು ಕೆರಳಿದ ಅವರು ಕೇಸ್ ಹಾಕಿರಿ ನಾವು ಎಳುವುದಿಲ್ಲ ಎಂದು ಪಟ್ಟು ಹಿಡಿದರು.
ಆನಂತರ ನೀರು ಸರಬರಾಜು ವ್ಯವಸ್ಥೆ ಮಾಡುವ ಮೂಲಕ ಪ್ರತಿಭಟನಾನಿರತರ ಮನವೊಲಿಸಿ ರಸ್ತೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.