ಬಾಗಲಕೋಟೆ prajakiran.com : ಮಹಾರಾಷ್ಟ್ರದ ಪಶ್ಚಿಮಘಟ್ಟದಲ್ಲಿ ಮಳೆಯ ಅಬ್ಬರ ಮುಂದುವರೆದಿದೆ.
ಅದೇ ರೀತಿ ಉತ್ತರಕರ್ನಾಟಕದ ಬೆಳಗಾವಿ, ಧಾರವಾಡ, ಬಾಗಲಕೋಟೆ,ಗದಗ ಜಿಲ್ಲೆಯ ನದಿಗಳಾದ ಕೃಷ್ಣಾ, ಘಟಪ್ರಭಾ ಹಾಗೂ ಮಲಪ್ರಭಾ ನದಿಗಳು ತುಂಬಿ ಹರಿಯುತ್ತಿವೆ.
ಇದರಿಂದಾಗಿ ನದಿಗಳ ಪಾತ್ರದ ಗ್ರಾಮಗಳಲ್ಲಿ ಪ್ರವಾಹದ ಭೀತಿ ಉಂಟಾಗಿದ್ದು, ಆ ಭಾಗದ ಜನರು ಆತಂಕಗೊಂಡಿದ್ದು, ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಬದುಕುತ್ತಿದ್ದಾರೆ. ಮಂಗಳವಾರ
ಜಮಖಂಡಿ ತಾಲೂಕಿನ ಶುರರ್ಪಾಲಿ,ಜುಂಝರವಾಡ , ತುಬಚಿ,ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ, ಸೇತುವೆಗಳ ಮೇಲೆ ನೀರು ಹರಿಯುತ್ತಿರುವುದರಿಂದ ಸಂಪರ್ಕ ಕಡಿತಗೊಂಡಿದೆ.