ಗಜೇಂದ್ರಗಡ prajakiran.com : ಶಾಲಾ ಅವರಣದಲ್ಲಿ ಬಿಜೆಪಿ ರಾಜಕೀಯ ಚಟುವಟಿಕೆಗಳನ್ನು ನಡೆಸುವ ಮೂಲಕ ಬಿಜೆಪಿ ರೋಣ ಶಾಸಕ ಕಳಕಪ್ಪ ಬಂಡಿ ಅಧಿಕಾರವನ್ನು ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಗಜೇಂದ್ರಗಡ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಶಿವರಾಜ್ ಘೋರ್ಪಡೆ ಬಿಜೆಪಿ ನಾಯಕರ ವಿರುದ್ದ ಕಿಡಿ ಕಾರಿದರು.
ಗಜೇಂದ್ರಗಡದ ಬ್ಲಾಕ್ ಕಾಂಗ್ರೇಸ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು ಬಿಜೆಪಿ ಅಧಿಕಾರದಲ್ಲಿದ್ದಾಗ ಏನು ಬೇಕಾದರೂ ಮಾಡಿದ್ರೂ ನಡೆಯುತ್ತದೆ.
ಅವರ ಇಚ್ಛೆಗೆ ಬಂದಂತೆ ಎರಡು ದಿನಗಳ ಬಿಜೆಪಿ ಪಕ್ಷದ ರಾಜಕೀಯ ಶಿಬಿರವನ್ನು ಗಜೇಂದ್ರಗಡದ ಸಿ.ಬಿ.ಎಸ್.ಸಿ ಶಾಲೆಯಲ್ಲಿ ನಡೆಸುವ ಮೂಲಕ ಇಲ್ಲಿನ ಶಾಸಕ ಬಂಡಿ ಅಧಿಕಾರವನ್ನು ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಯಾವುದೇ ಶಿಕ್ಷಣ ಸಂಸ್ಥೆಗಳಲ್ಲಿ ರಾಜಕೀಯ ಪಕ್ಷಗಳ ಚಟುವಟಿಕೆಗಳನ್ನು ಮಾಡಲು ಅವಕಾಶವಿರುವುದಿಲ್ಲ.
ಆದ್ರೂ ಶಾಸಕರು ತಮ್ಮ ಅಧಿಕಾರ ಬಳಸಿಕೊಂಡು ಅಧಿಕಾರಿಗಳ ಮೇಲೆ ಒತ್ತಡ ಹೇರಿ ಇಲ್ಲಿ ಶಿಬಿರವನ್ನು ನಡೆಸಿದ್ದಾರೆ. ಇದು ಎಷ್ಟರಮಟ್ಟಿಗೆ ಸರಿಯಿದೆ.
ಅಧಿಕಾರದಲ್ಲಿರುವಾಗ ಬಿಜೆಪಿ ನಾಯಕರು ಏನೇ ಮಾಡಿದರು ನಡೆಯುತ್ತದೆ ಎನ್ನುವ ಹುಂಬತನದಲ್ಲಿದ್ದರೆ ಅದನ್ನು ಮೊದಲು ತೆಲೆಯಿಂದ ತೆಗೆದು ಹಾಕಿ ಇಲ್ಲವಾದ್ರೆ ಮುಂದಿನ ದಿನದಲ್ಲಿ ನಿಮಗೆ ತಕ್ಕಪಾಠ ಕಲಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಈ ಕುರಿತು ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಮತ್ತು ಸಂಬAಧ ಪಟ್ಟ ಇಲಾಖೆ ಅಧಿಕಾರಿಗಳು ಸ್ಪಷ್ಟತೆ ಕೊಡಬೇಕು ಎಂದು ಒತ್ತಾಯಿಸಿದರು.
ಆ ಮೂಲಕ ಶಾಲಾ ಅಂಗಳಕ್ಕು ರಾಜಕೀಯದ ಬಣ್ಣ ಹಚ್ಚಲು ಹೋರಟಿರುವುದು ಖಂಡನೀಯ, ಇದನ್ನು ಬ್ಲಾಕ್ ಕಾಂಗ್ರೇಸ್ ಸಮಿತಿಯು ತೀವ್ರವಾಗಿ ಖಂಡಿಸುತ್ತದೆ ಎಂದರು.