ಕೊಡಗು prajakiran.com : ಸಹಾಯಕ ಸಬ್ ಇನ್ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಒಂದೇ ತಿಂಗಳಿನಲ್ಲಿ ಗುಂಡು ಹೊಡೆದು ನಿವೃತ್ತ ಎಎಸ್ ಐ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಸೋಮವಾರಪೇಟೆ ಸಮೀಪದ ಮಾದೇಗೋಡು ಗ್ರಾಮದಲ್ಲಿ ಈ ರ್ದುಘಟನೆ ನಡೆದಿದೆ.
ಮೃತರನ್ನು ಎಂ.ಎಸ್. ಈರಪ್ಪ (61) ಎಂದು ಗುರುತಿಸಲಾಗಿದ್ದು, ಇವರು ಕಳೆದ ಒಂದು ವರ್ಷದಿಂದ ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಎಎಸ್ಐ ಆಗಿ ಸೇವೆ ಸಲ್ಲಿಸಿ, ಕಳೆದ ಮೇ ೩೦ ರಂದು ಸೇವಾ ನಿವೃತ್ತಿ ಹೊಂದಿದ್ದರು.
ಮಂಗಳವಾರ ಬೆಳಗ್ಗೆ ತಮ್ಮ ಮನೆಯಲ್ಲೇ ಒಂಟಿ ನಳಿಕೆಯ ಬಂದೂಕು ಬಳಸಿ ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಏನೆಂಬುದು ಈವರೆಗೆ ತಿಳಿದು ಬಂದಿಲ್ಲ. ಮೃತ ಎಎಸ್ ಐಗೆ ಪತ್ನಿ, ಪುತ್ರಿ ಮತ್ತುಇಬ್ಬರು ಪುತ್ರರನ್ನು ಇದ್ದಾರೆ.
ಈ ಕುರಿತು ಶನಿವಾರಸಂತೆ ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡು ತನಿಖೆ ನಡೆಸುತಿದ್ದಾರೆ.