ಧಾರವಾಡ ಪ್ರಜಾಕಿರಣ.ಕಾಮ್ : ನಿವೃತ್ತ ಯೋಧನ ಮನೆಗೆ ಕನ್ನ ಹಾಕಿರುವ ಘಟನೆ ಧಾರವಾಡದ ಚೈತನ್ಯನಗರದಲ್ಲಿ ಭಾನುವಾರ ರಾತ್ರಿ ನಡೆದಿದೆ.
ಮನೆಯ ಬಾಗಿಲು ಕೀಲಿ ಹಾಕಿದ್ದನ್ನು ಗಮನಿಸಿದ ಖದೀಮರು ತಮ್ಮ ಕೈ ಚಳಕ ತೋರಿಸಿದ್ದು, ಅದನ್ನು ಮುರಿದು ಒಳನುಗ್ಗಿದ್ದಾರೆ.
ಆ ಬಳಿಕ ಮನೆಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ನಗದು ಹಣವನ್ನು ದೋಚಿದ್ದಾರೆ ಎಂದು ಮನೆ ಮಾಲೀಕರಾಗಿರುವ ನಿವೃತ್ತ ಯೋಧ ಚಿದಾನಂದ ಹೊಟ್ಟೆಮ್ಮನವರ ದೂರು ನೀಡಿದ್ದಾರೆ
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಧಾರವಾಡದ ಉಪನಗರ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ, ಮುಂದಿನ ಕ್ರಮ ಜರುಗಿಸಿದ್ದಾರೆ.